Friday, September 20, 2024
Friday, September 20, 2024

ಪಡುಕರೆ ಕಾಲೇಜಿನಲ್ಲಿ ಉನ್ನತಿ ತರಬೇತಿ ಸಮಾರೋಪ

ಪಡುಕರೆ ಕಾಲೇಜಿನಲ್ಲಿ ಉನ್ನತಿ ತರಬೇತಿ ಸಮಾರೋಪ

Date:

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಇಲ್ಲಿನ ಐಕ್ಯೂಎಸಿ ಆಶ್ರಯದಲ್ಲಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್‌ನಿಂದ ಬೆಂಗಳೂರಿನ ಉನ್ನತಿ ಫೌಂಡೇಶನ್ ಇವರಿಂದ ಜೀವನ ಕೌಶಲ್ಯ ಮತ್ತು ವೃತ್ತಿ ಕೌಶಲ್ಯ 165 ಗಂಟೆಗಳ ತರಬೇತಿಯ ಸರ್ಟಿಫಿಕೇಟ್ ಕೋರ್ಸ್ ಇದರ ಸಮಾರೋಪ ಸಮಾರಂಭ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉನ್ನತಿ ಫೌಂಡೇಶನ್‌ನ ತರಬೇತುದಾರರಾದ ಶಿಲ್ಪಾ ಭಟ್ ತರಬೇತಿಯಲ್ಲಿ ಪಡೆದುಕೊಳ್ಳಲಾದ ಕೌಶಲಗಳನ್ನು ಯಾವ ರೀತಿಯಲ್ಲಿ ಮುಂದೆ ಉದ್ಯೋಗ ಪಡೆದುಕೊಳ್ಳಲು ಬಳಸಿಕೊಳ್ಳಬಹುದು
ಹಾಗೂ ಜೀವನದಲ್ಲಿ ಯಶಸ್ವಿಯಾಗಬಹುದೆಂದು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್, ಇಂತಹ ತರಬೇತಿಗಳು ವಿದ್ಯಾರ್ಥಿಗಳನ್ನು ಆಧುನಿಕ ಜಗತ್ತಿನ ಅವಶ್ಯಕತೆಗಳಿಗನುಗುಣವಾಗಿ ಬದಲಾಯಿಸಬಲ್ಲದು ಎಂಬುದನ್ನು ವಿವರಿಸಿದರು. ಕೋರ್ಸ್ ಸಂಚಾಲಕರಾದ ಪ್ರಶಾಂತ್ ನೀಲಾವರ ಸರ್ಟಿಫಿಕೇಟ್ ಕೋರ್ಸ್ನಲ್ಲಿ ನೀಡಲಾದ ತರಬೇತಿಯ ವಿವರವನ್ನು ತೆರೆದಿಟ್ಟರು.

ತರಬೇತಿಯಲ್ಲಿ ವೃತ್ತಿ ಕೌಶಲ್ಯ, ಕಾರ್ಪೊರೇಟ್ ಸ್ಕಿಲ್ಸ್, ಸಂವಹನ ಕಲೆ, ರೆಸ್ಯೂಮ್ ರೈಟಿಂಗ್, ಸಂದರ್ಶನ ಕಲೆ, ಗ್ರೂಪ್ ಡಿಸ್ಕಶನ್, ಮನೋಸಾಮರ್ಥ್ಯ ಇತ್ಯಾದಿ ವಿಷಯಗಳನ್ನೊಳಗೊಂಡ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ತಸ್ಕಿನಾ, ನಿತಿಶ್ ಹಾಗೂ ತೃಪ್ತಿ ಅನುಭವ ಹಂಚಿಕೊಂಡರು. ಅಂತಿಮ ಬಿಕಾಂ ಸುಜನ್ಯ ಸ್ವಾಗತಿಸಿ, ಅಂತಿಮ ಬಿ.ಎಸ್.ಡಬ್ಲ್ಯೂ ಶ್ವೇತಾ ವಂದನಾರ್ಪಣೆಗೈದರು. ಅಂತಿಮ ಬಿಕಾಂ ಸಿಂಧೂ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!