Tuesday, February 25, 2025
Tuesday, February 25, 2025

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿ

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿ

Date:

ಉಡುಪಿ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಂಗಾವತಿ ಹಾಗೂ ಗದಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿದ್ಯಾರ್ಥಿಗಳು ಭಾಗವಹಿಸಿ 46 ಪದಕಗಳನ್ನು ಪಡೆದಿರುತ್ತಾರೆ.

ಅಂಬಲಪಾಡಿ, ಕಡೆಕಾರು, ಅಲೆವೂರು ಹಾಗೂ ಚಿಟ್ಪಾಡಿ ಡೋಜೊ ಇದರ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಧರ್ಮದರ್ಶಿಗಳು ಹಾಗೂ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಗೌರವಾಧ್ಯಕ್ಷರಾದ ಡಾ. ನಿ.ಬೀ. ವಿಜಯ ಬಲ್ಲಾಳ್ ರವರು ಪದಕ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ದೇವಾಡಿಗರ ಸಂಘ ಚಿಟ್ಪಾಡಿ-ಉಡುಪಿ ಅಧ್ಯಕ್ಷ ರತ್ನಾಕರ ದೇವಾಡಿಗ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲೆವೂರು ಅಧ್ಯಕ್ಷ ಸಂತೋಷ್ ಪೂಜಾರಿ, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಹಾಗೂ ಬುಡೋಕಾನ್ ಕರಾಟೆ ಎಂಡ್ ‌ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ಮತ್ತು ಮುಖ್ಯ ಶಿಕ್ಷಕರಾದ ರೆಂಷಿ. ವಾಮನ್ ಪಾಲನ್ ಮತ್ತು ಪ್ರಶಸ್ತಿ ವಿಜೇತ ಕರಾಟೆ ಪಟುಗಳು ಉಪಸ್ಥಿತರಿದ್ದರು. ರಾಷ್ಟ್ರಮಟ್ಟದ ಕರಾಟೆ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿರುವ 4 ಡೋಜೊಗಳ ವಿದ್ಯಾರ್ಥಿಗಳು 11 ಚಿನ್ನದ ಪದಕ, 8 ಬೆಳ್ಳಿಯ ಪದಕ ಹಾಗೂ 4 ಕಂಚಿನ ಪದಕಗಳನ್ನು ಜಯಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!