Saturday, September 21, 2024
Saturday, September 21, 2024

ಉಡುಪಿ ಜಿಲ್ಲಾಸ್ಪತ್ರೆಗೆ ಅತ್ಯಾಧುನಿಕ ಆಂಬುಲೆನ್ಸ್ ಹಸ್ತಾಂತರ

ಉಡುಪಿ ಜಿಲ್ಲಾಸ್ಪತ್ರೆಗೆ ಅತ್ಯಾಧುನಿಕ ಆಂಬುಲೆನ್ಸ್ ಹಸ್ತಾಂತರ

Date:

ಉಡುಪಿ: ಎಂ.ಟಿ.ಆರ್ ಸಂಸ್ಥೆಯು ಸಿಎಸ್‌ಆರ್ ಚಟುವಟಿಕೆಯಡಿ 50 ಲಕ್ಷ ರೂಗಳಲ್ಲಿ ಒಂದು ಹವಾನಿಯಂತ್ರಿತ ವೆಂಟಿಲೇಟರ್ ಸೌಲಭ್ಯವನ್ನು ಒಳಗೊಂಡ ಅತ್ಯಾಧುನಿಕ ಆ್ಯಂಬುಲೆನ್ಸ್ ಹಾಗೂ 10 ಐಸಿಯು ಬೆಡ್‌ಗಳನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರ ಸಮ್ಮುಖದಲ್ಲಿ ಜಿಲ್ಲಾಸ್ಪತ್ರೆಗೆ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದು ಹಸ್ತಾಂತರಿಸಲಾಯಿತು.

ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗೆ ಅನುಕೂಲವಾಗುವಂತೆ ಜಿಲ್ಲೆಯ ವಿವಿಧ ಖಾಸಗಿ ಸಂಸ್ಥೆಗಳು, ದಾನಿಗಳು ಸಹಕಾರ ನೀಡುತ್ತಿದ್ದು ಆ ನಿಟ್ಟಿನಲ್ಲಿ ಎಂಟಿಆರ್ ಫುಡ್ ಸಂಸ್ಥೆಯು ಪ್ರಸ್ತುತ ಅವಶ್ಯವಿರುವ ಮತ್ತು ಕೋವಿಡ್ ೩ನೇ ಅಲೆಯ ಮುಂಜಾಗ್ರತೆಯ ದೃಷ್ಟಿಯಿಂದ 50 ಲಕ್ಷ ರೂಗಳಲ್ಲಿ ನೆರವು ನೀಡಿರುವುದು ಜಿಲ್ಲಾಭಿವೃದ್ಧಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ ಎಂದರು.

ಎಂಟಿಆರ್ ಸಂಸ್ಥೆಯ ಜನರಲ್ ಬ್ಯುಸಿನೆಸ್ ಮ್ಯಾನೇಜರ್ ಮೂರ್ತಿ ಆರ್ ಮಾತನಾಡಿ, ಎಂ.ಟಿ.ಆರ್ ಸಂಸ್ಥೆಯು ಸಾರ್ವಜನಿಕರ ಸೇವೆಯನ್ನು ಮಾಡುವುದು ಸಂಸ್ಥೆಯ ಮುಖ್ಯ ಗುರಿ ಹೊಂದಿದ್ದು, ಒಂದು ವರ್ಷದ ಗ್ಯಾರೆಂಟಿ ಮತ್ತು ವಾರೆಂಟಿ, ಉಚಿತ ಸರ್ವಿಸ್ ಇರುವ ಸುಸಜ್ಜಿತ ಆ್ಯಂಬುಲೆನ್ಸ್ ಹಾಗೂ 10 ವೆಂಟಿಲೇಟರ್ ಬೆಡ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ, ಸಾರ್ವಜನಿಕರು ಸೂಕ್ತ ರೀತಿಯಲ್ಲಿ ಇದರ ಉಪಯೋಗ ಪಡೆದುಕೊಂಡಲ್ಲಿ ಸಂಸ್ಥೆಯ ಕೊಡುಗೆಗೆ ಮಹತ್ವ ಸಿಕ್ಕಂತಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಡಿ.ಹೆಚ್.ಓ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್, ಎಂ.ಟಿ.ಆರ್ ಸಂಸ್ಥೆಯ ಮುಖ್ಯಾಧಿಕಾರಿ ಪ್ರಕಾಶ್ ದೇಬಶೆಟ್ಟಿ, ಸಂಸ್ಥೆಯ ಏರಿಯಾ ಸೇಲ್ಸ್ ಮ್ಯಾನೇಜರ್ ಆಶಿಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!