Sunday, February 23, 2025
Sunday, February 23, 2025

ಉಡುಪಿ: ಆಗಸ್ಟ್ 2 ರಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಉಡುಪಿ: ಆಗಸ್ಟ್ 2 ರಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

Date:

ಉಡುಪಿ: ಜಿಲ್ಲೆಯಲ್ಲಿ ಆಗಸ್ಟ್ 2 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ (ಜಿಲ್ಲಾ ಆಸ್ಪತ್ರೆಯ ಹಿಂಭಾಗ) -ಕೋವಿಶೀಲ್ಡ್ 1ನೇ ಡೋಸ್ (200 ಡೋಸ್ ಲಭ್ಯ).

ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) -ಕೋವಿಶೀಲ್ಡ್ 1ನೇ ಡೋಸ್ (300 ಡೋಸ್ ಲಭ್ಯ), 2 ನೇ ಡೋಸ್ ಕೋವಿಶೀಲ್ಡ್ (600 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್ (120 ಡೋಸ್ ಲಭ್ಯ).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಬಳಿ)- ಕೋವಿಶೀಲ್ಡ್ 2ನೇ ಡೋಸ್ (300 ಡೋಸ್ ಲಭ್ಯ) (ಆನ್ ಲೈನ್ ನೋಂದಣಿ ಸೇರಿ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ  (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿ)- ಕೋವಿಶೀಲ್ಡ್ 2ನೇ ಡೋಸ್ (350 ಡೋಸ್ ಲಭ್ಯ) (ಆನ್ ಲೈನ್ ನೋಂದಣಿ ಸೇರಿ)

ಎಫ್.ಪಿ.ಎ.ಐ ಕುಕ್ಕಿಕ್ಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಂದಿರಾನಗರ)- ಕೋವಿಶೀಲ್ಡ್ 1ನೇ ಡೋಸ್ (50 ಡೋಸ್ ಲಭ್ಯ), ಕೋವಿಶೀಲ್ಡ್ 2ನೇ ಡೋಸ್ (200 ಲಭ್ಯ)

ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ ಅಪರಾಹ್ನ 1 ರವರೆಗೆ- ಆಗಸ್ಟ್ 20ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ 200 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!