Friday, September 27, 2024
Friday, September 27, 2024

ಉಡುಪಿ: ಜು.26 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜು.26 ರಂದು ಲಸಿಕೆ ಲಭ್ಯತೆ ವಿವರ

Date:

ಉಡುಪಿ: ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಮತ್ತು ಆದ್ಯತಾ ಗುಂಪಿನವರಿಗೆ ಕೋವಿಡ್-19 1ನೇ, 2ನೇ ಡೋಸ್ ಲಸಿಕೆ ಲಭ್ಯ.

ದಿನಾಂಕ 26/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ, ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಮತ್ತು ಎಸ್.ಎ.ಎಮ್., ಎಮ್.ಎ.ಎಮ್ ಮಕ್ಕಳ ಆರೈಕೆದಾರರಿಗೆ ಕೋವಿಡ್-19 ಪ್ರಥಮ, 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಅಜ್ಜರಕಾಡು ಉಡುಪಿ (ಜಿಲ್ಲಾ ಆಸ್ಪತ್ರೆಯ ಹಿಂಭಾಗ)- ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್- (150 ಡೋಸ್ ಲಭ್ಯ).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್- (200 ಡೋಸ್ ಲಭ್ಯ).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿ)- ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್- (200 ಡೋಸ್ ಲಭ್ಯ).

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ- ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್- (150 ಡೋಸ್ ಲಭ್ಯ), ಕೋವ್ಯಾಕ್ಸಿನ್ -2ನೇ ಡೋಸ್ ಮಾತ್ರ (30 ಡೋಸ್ ಲಭ್ಯ).

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರ ವರೆಗೆ)- ದಿನಾಂಕ 03/08/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ).

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಮತ್ತು ಎಸ್.ಎ.ಎಮ್., ಎಮ್.ಎ.ಎಮ್ ಮಕ್ಕಳ ಆರೈಕೆದಾರರು ಕೋವಿಡ್-19 ಪ್ರಥಮ, 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ...
error: Content is protected !!