Monday, September 7, 2026
Monday, September 7, 2026

ಉಡುಪಿ: ಜು.26 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜು.26 ರಂದು ಲಸಿಕೆ ಲಭ್ಯತೆ ವಿವರ

Date:

ಉಡುಪಿ: ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಮತ್ತು ಆದ್ಯತಾ ಗುಂಪಿನವರಿಗೆ ಕೋವಿಡ್-19 1ನೇ, 2ನೇ ಡೋಸ್ ಲಸಿಕೆ ಲಭ್ಯ.

ದಿನಾಂಕ 26/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ, ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಮತ್ತು ಎಸ್.ಎ.ಎಮ್., ಎಮ್.ಎ.ಎಮ್ ಮಕ್ಕಳ ಆರೈಕೆದಾರರಿಗೆ ಕೋವಿಡ್-19 ಪ್ರಥಮ, 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಅಜ್ಜರಕಾಡು ಉಡುಪಿ (ಜಿಲ್ಲಾ ಆಸ್ಪತ್ರೆಯ ಹಿಂಭಾಗ)- ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್- (150 ಡೋಸ್ ಲಭ್ಯ).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್- (200 ಡೋಸ್ ಲಭ್ಯ).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿ)- ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್- (200 ಡೋಸ್ ಲಭ್ಯ).

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ- ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್- (150 ಡೋಸ್ ಲಭ್ಯ), ಕೋವ್ಯಾಕ್ಸಿನ್ -2ನೇ ಡೋಸ್ ಮಾತ್ರ (30 ಡೋಸ್ ಲಭ್ಯ).

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರ ವರೆಗೆ)- ದಿನಾಂಕ 03/08/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ).

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಮತ್ತು ಎಸ್.ಎ.ಎಮ್., ಎಮ್.ಎ.ಎಮ್ ಮಕ್ಕಳ ಆರೈಕೆದಾರರು ಕೋವಿಡ್-19 ಪ್ರಥಮ, 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!