Wednesday, July 29, 2026
Wednesday, July 29, 2026

ಬ್ರಹ್ಮಾವರ: ಹಣ್ಣು ಮತ್ತು ಔಷಧೀಯ ಸಸ್ಯಗಳ ವಿತರಣೆ

ಬ್ರಹ್ಮಾವರ: ಹಣ್ಣು ಮತ್ತು ಔಷಧೀಯ ಸಸ್ಯಗಳ ವಿತರಣೆ

Date:

ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಬ್ರಹ್ಮಾವರ ಇದರ ವತಿಯಿಂದ ಬೃಹತ್ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸುಮಾರು ಮೂರು ಸಾವಿರ ಹಣ್ಣು ಮತ್ತು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು.

ವೈದ್ಯರ ದಿನಾಚರಣೆಯ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯರಾದ ಡಾ. ಅಜಿತ್ ಕುಮಾರ್ ಶೆಟ್ಟಿ, ಡಾ. ಮಹೇಶ್ ಐತಾಳ, ಡಾ. ಎರಿಕ್ ಫೆರ್ನಾಂಡೀಸ್, ಡಾ. ಮಹಾಬಲ ಕೆ.ಎಸ್ ರವರನ್ನು ಸನ್ಮಾನಿಸಲಾಯಿತು. ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಡಾ. ರಾಮಚಂದ್ರ ಕಾಮತ್ ಹಾಗೂ ರಾಜ್ಯ ವೈದ್ಯಕೀಯ ಪ್ರಕೋಷ್ಠದ ಪದಾಧಿಕಾರಿ ಡಾ. ವಿಜಯೀoದ್ರ ವಸಂತ್ ಚಾಲನೆ ನೀಡಿ ಶುಭ ಹಾರೈಸಿದರು.

ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂದನ್ ಹೇರೂರು ಪ್ರಸ್ತಾವನೆಗೈದರು. ಸುವರ್ಣ ಎಂಟರ್ಪ್ರೈಸ್ ಮುಖ್ಯಸ್ಥರಾದ ಸುನಿತಾ ಮಧುಸೂದನ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಮಿಲ್ಟನ್ ಒಲಿವೇರಾ, ದರ್ಶಕ್, ವಿವೇಕಾನಂದ ಕಾಮತ್, ಮುಂತಾದವರು ಉಪಸ್ಥಿತರಿದ್ದರು. ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!