Friday, September 20, 2024
Friday, September 20, 2024

ಸಾಸ್ತಾನ: ವಿಜಯನಗರ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆ

ಸಾಸ್ತಾನ: ವಿಜಯನಗರ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆ

Date:

ಬ್ರಹ್ಮಾವರ: ಸಾಸ್ತಾನದ ಪಾಂಡೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಂಕಬೆಟ್ಟು ಪ್ರದೇಶದ ಶ್ರೀನಿವಾಸ ಭಟ್ ಅವರ ಮನೆಯ ಹಿಂಭಾಗದ ಬಾವಿಯ ಸಮೀಪದಲ್ಲಿ 14 ನೇ ಶತಮಾನದ ಶಾಸನವನ್ನು ಇತಿಹಾಸ‌ ಮತ್ತು ಪುರಾತತ್ವ ವಿದ್ವಾಂಸರಾದ ಡಾ| ಎಸ್.ಜಿ. ಸಾಮಕ್ ಅವರು ಪತ್ತೆ ಮಾಡಿದ್ದು, ಇದನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.

ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು 180 ಸೆಂ.ಮೀ ಎತ್ತರ 60 ಸೆಂ.ಮೀ ಅಗಲವಿದೆ. ಶಾಸನದ ಮೇಲ್ಬಾಗದಲ್ಲಿ ಬ್ರಾಹ್ಮಣ ವಟು ಹಾಗೂ ಇಕ್ಕೆಲಗಳಲ್ಲಿ ಸೂರ್ಯ-ಚಂದ್ರ ಮತ್ತು ಶಂಖ-ಚಕ್ರದ ಉಬ್ಬು ಕೆತ್ತನೆಯಿದೆ. ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನವನ್ನು ಬಾವಿಯ ಹಾಸುಗಲ್ಲಾಗಿ ಬಳಸಿಕೊಂಡಿರುವುದರಿಂದ ಹೆಚ್ಚಿನ ಅಕ್ಷರಗಳು ತೃಟಿತಗೊಂಡಿದ್ದು, ಶಾಸನದಲ್ಲಿ ಶಕವರುಷ 1355 (ಕ್ರಿ.ಶ 1433) ನೇ ಪ್ರಮಾದಿ (ಪ್ರಮಾದ) ನಾಮ ಸಂವತ್ಸರದ ಉಲ್ಲೇಖವಿದೆ.

ವಿಜಯನಗರವನ್ನು ಶ್ರೀ ವೀರ ಪ್ರತಾಪ ದೇವರಾಯ ಆಳ್ವಿಕೆ ಮಾಡುತ್ತಿರುವ ಕಾಲದಲ್ಲಿ ಬಾರಕೂರನ್ನು ಅಂಣಪ್ಪ ಒಡೆಯ ಪ್ರತಿಪಾಲಿಸುತ್ತಿರುವಾಗ ಬ್ರಾಹ್ಮಣರಿಗೆ ದಾನವನ್ನು ನೀಡಿರುವ ಮಾಹಿತಿಯನ್ನು ‌ಈ ಶಾಸನವು ತಿಳಿಸುತ್ತದೆ. ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯದ ಕೆಲವೊಂದು ಪದಗಳು ತಿಳಿಯುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!