Friday, September 20, 2024
Friday, September 20, 2024

ಯುವಕ ಮಂಡಲದ ಮೊದಲ ಧ್ಯೇಯ ಸ್ವಚ್ಚತೆಯಾಗಿರಲಿ: ಸತೀಶ್ ನಾಯ್ಕ್

ಯುವಕ ಮಂಡಲದ ಮೊದಲ ಧ್ಯೇಯ ಸ್ವಚ್ಚತೆಯಾಗಿರಲಿ: ಸತೀಶ್ ನಾಯ್ಕ್

Date:

ಕೋಟ: ಯುವಕ ಮಂಡಲದ ಮೊದಲ ಧ್ಯೇಯ ಸ್ವಚ್ಚತೆಯಾಗಿದ್ದು, ಯುವಕ ಮಂಡಲವು ಸಮಾಜಮುಖಿ ಕಾರ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಶ್ರೀವಿನಾಯಕ ಯುವಕ ಮಂಡಲ ಈ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ಹೆಜ್ಜೆಯನ್ನಿಡುತ್ತಿದೆ ಎಂದು ಮಹಾತ್ಮ ಗಾಂಧಿ ಪ್ರೌಢಶಾಲೆಯ ಮುಖ್ಯೋಪಾಧ್ಯಯ ಸತೀಶ್ ನಾಯ್ಕ್ ಅವರು ಹೇಳಿದರು.

ಅವರು ಶ್ರೀವಿನಾಯಕ ಯುವಕ ಮಂಡಲ (ರಿ.) ಸೈಬ್ರಕಟ್ಟೆ-ಯಡ್ತಾಡಿ ಇದರ ೭೫ ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಪ್ರೌಢಶಾಲೆ ಸೈಬ್ರಕಟ್ಟೆಯಲ್ಲಿ ಶಾಲಾ ವಠಾರ ಸ್ವಚ್ಚತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಪುರೋಹಿತರಾದ ರಾಜೇಶ್ ಐತಾಳ್ ಎತ್ತಿನಟ್ಟೆ, ಯುವಕ ಮಂಡಲದ ಅಧ್ಯಕ್ಷ ರತ್ನಾಕರ ಪೂಜಾರಿ, ನೆಹರು ಯುವ ಕೇಂದ್ರ, ಉಡುಪಿ ಇದರ ಪ್ರದೀಪ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ ಕೊಳ್ಕೆಬೈಲು, ಯುವಕ ಮಂಡಲದ ಕಾರ್ಯದರ್ಶಿ ಪ್ರಶಾಂತ್ ಸೂರ್ಯ, ಉಪಾಧ್ಯಕ್ಷ ರಾಜೇಶ್ ದೇವಾಡಿಗ ಹಾಗೂ ಅಧ್ಯಪಾಕ ವೃಂದ, ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!