Sunday, February 23, 2025
Sunday, February 23, 2025

ಪತಿ ಸಾವಿನಿಂದ ಮಾನಸಿಕ ಅಸ್ವಸ್ಥಳಾದ ಮಹಿಳೆಯ ರಕ್ಷಣೆ

ಪತಿ ಸಾವಿನಿಂದ ಮಾನಸಿಕ ಅಸ್ವಸ್ಥಳಾದ ಮಹಿಳೆಯ ರಕ್ಷಣೆ

Date:

ಪತಿಯ ಸಾವಿನಿಂದ ನೊಂದು ಅತಂತ್ರಳಾದ ಮಹಿಳೆಯೋರ್ವಳು ಒಂಟಿಯಾಗಿದ್ದು ತೀರಾ ಮಾನಸಿಕ ಅಸ್ವಸ್ಥಳಾಗಿದ್ದು ವಿಷಯ ತಿಳಿದ ವಿಶು ಶೆಟ್ಟಿಯವರು ಕೋಟ ಠಾಣೆಯ ಎ.ಎಸ್.ಐ. ಮುಕ್ತಾರವರ ಸಹಾಯದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ಶನಿವಾರ ಸಂಜೆ ನಡೆದಿದೆ.

ಘಟನೆಯ ವಿವರ: ಮಹಿಳೆಯ ಪತಿ ಕೃಷ್ಣಮೂರ್ತಿ ಹೊಳ್ಳ ಮೇ 17ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಈ ದಂಪತಿಗಳ ಪ್ರೇಮ ವಿವಾಹವಾಗಿದ್ದು ಮಕ್ಕಳಿರಲಿಲ್ಲ. ಮದುವೆಗೆ ಎರಡು ಕುಟುಂಬಗಳ ಸಮ್ಮತಿ ಇರಲಿಲ್ಲ ಎಂದು ತಿಳಿದು ಬಂದಿದೆ. ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಪತಿ ನಿಧನದ ನಂತರ ಪತ್ನಿ ಏಕಾಂಗಿಯಾಗಿದ್ದು ಸಂಬಂಧಿಕರ ಸ್ಪಂದನೆ ಇರದೇ ಇರುವುದರಿಂದ ಮಹಿಳೆ ತೀರಾ ಮನನೊಂದು ಮಾನಸಿಕವಾಗಿ ಅಸ್ವಸ್ಥಳಾಗಿ, ಅಡುಗೆ ಕೂಡ ಮಾಡದೆ ಒಂಟಿಯಾಗಿ ಅಸಹಾಯಕ ಬದುಕು ಸಾಗಿಸುತ್ತಿದ್ದರು. ನೆರೆಮನೆಯವರು ಆಹಾರ ನೀಡಿ ಸಂತೈಸುತ್ತಿದ್ದರು. ಇದೀಗ ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದ್ದು ಸ್ಥಳೀಯರು ವಿಶು ಶೆಟ್ಟಿಯವರಲ್ಲಿ ಮಹಿಳೆಯ ರಕ್ಷಣೆಗೆ ನೆರವು ಕೇಳಿದ್ದಾರೆ. ಕೂಡಲೇ ವಿಶು ಶೆಟ್ಟಿಯವರು ಕೋಟ ಠಾಣೆಯ ಎ.ಎಸ್.ಐ. ಮುಕ್ತಾರವರೊಂದಿಗೆ ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ವಶಕ್ಕೆ ಪಡೆದು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಹಿಳೆಯ ಸಂಬಂಧಿಕರು ಸ್ಪಂದಿಸದೆ ಇರುವುದು ಖಂಡನೀಯ. ಭವಿಷ್ಯದಲ್ಲಿ ಯಾರೂ ಸ್ಪಂದಿಸದೆ ಇದ್ದಲ್ಲಿ ಸಂಬಂಧಪಟ್ಟ ಇಲಾಖೆ ಮಹಿಳೆಯ ರಕ್ಷಣೆಯ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕಾಗಿ ವಿಶು ಶೆಟ್ಟಿಯವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!