Home ಸುದ್ಧಿಗಳು ಪ್ರಾದೇಶಿಕ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್: ವೃಕ್ಷಾರೋಪಣ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್: ವೃಕ್ಷಾರೋಪಣ

507
0

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಆಶ್ರಯದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಕ್ಲಬ್ಬಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಆಗಿದ್ದ, ಅನಿವಾಸಿ ಭಾರತೀಯ ಉದ್ಯಮಿ ಕೆಂಜೂರು ಶಶಿಧರ ಶೆಟ್ಟಿ ಅವರು ಗಿಡ ನೆಡುವ ಮೂಲಕ ವೃಕ್ಷಾರೋಪಣಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರೂ ಮನೆಯ ಪರಿಸರದಲ್ಲಿ ಹಸಿರು ಪದರವನ್ನು ಹೆಚ್ಚಿಸುವ ಕೆಲಸ ಮಾಡಬೇಕು. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಸಾಂಘಿಕ ಪ್ರಯತ್ನಗಳ ಅವಶ್ಯಕತೆಯಿದೆ ಎಂದರು. 100ಕ್ಕೂ ಹೆಚ್ಚು ಗಿಡಗಳನ್ನು ಕ್ಲಬ್ಬಿನ ಆವರಣದಲ್ಲಿ ನೆಡಲಾಯಿತು.

ಮುಂಬರುವ ದಿನಗಳಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇನ್ನಷ್ಟು ಪರಿಸರ ಕಾಳಜಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಎಂ. ಚಂದ್ರಶೇಖರ ಹೆಗ್ಡೆ ಹೇಳಿದರು.

ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಗ್ರೆಗೊರಿ ಡಿಸಿಲ್ವ, ಸದಸ್ಯರಾದ ಜೇಮ್ಸ್ ಒಲಿವೆಯಿರ, ಜೋಸೆಫ್ ಸುವರೆಸ್, ಸುದೇಶ್ ಹೆಗ್ಡೆ, ಪ್ರಮೋದ್ ಶೆಟ್ಟಿ, ಪ್ರಸನ್ನ ಶೆಟ್ಟಿ, ವಿವೇಕ್ ಕರ್ನೇಲಿಯೋ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.