Saturday, September 21, 2024
Saturday, September 21, 2024

ಕರಾವಳಿ ಬೈಪಾಸ್ ಬಳಿ ತ್ಯಾಜ್ಯದ ರಾಶಿ; ಸೂಕ್ತ ಕ್ರಮಕ್ಕೆ ಆಗ್ರಹ

ಕರಾವಳಿ ಬೈಪಾಸ್ ಬಳಿ ತ್ಯಾಜ್ಯದ ರಾಶಿ; ಸೂಕ್ತ ಕ್ರಮಕ್ಕೆ ಆಗ್ರಹ

Date:

ಉಡುಪಿ: ರಾಷ್ಟ್ರೀಯ ಹೆದ್ದಾರಿ 66, ಕರಾವಳಿ ಬೈಪಾಸ್ ಬಳಿ ಕೋಳಿ ತ್ಯಾಜ್ಯ, ಸಿಯಾಳ ಬೊಂಡ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಎಸೆಯಲಾಗಿದ್ದು ಪರಿಸರದಲ್ಲಿ ಗಬ್ಬು ವಾಸನೆ ಹರಡಿದೆ. ಪರಿಸರದ ಸೌಂದರ್ಯವು ಹಾಳಾಗಿದೆ. ಬೊಂಡದ ಚಿಪ್ಪುಗಳಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು, ಸೊಳ್ಳೆಗಳು ಮೊಟ್ಟೆ ಇಟ್ಟಿರುವುದು ಕಂಡುಬಂದಿದೆ. ಉಡುಪಿ ನಗರವನ್ನು ಪ್ರವೇಶಿಸುವ ಕಡೆಯಲ್ಲಿಯೇ ಈ ರೀತಿ ಪರಿಸ್ಥಿತಿ ಇರುವುದು ಬೇಸರದ ಸಂಗತಿ.

ಮಲೇರಿಯಾ, ಡೆಂಗ್ಯೂ ಕಾಯಿಲೆ ಹರಡುವ ರೋಗವಾಹಕ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಇಲ್ಲಿಯ ಸ್ಥಳ ಮಾರ್ಪಟ್ಟಿದೆ. ಸಾಮಾಜಿಕ ಪ್ರಜ್ಞೆ ಇಲ್ಲದ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!