Monday, February 24, 2025
Monday, February 24, 2025

ಮಕ್ಕಳ ಗ್ರಾಮಸಭೆ- ಬಾಲ ಪ್ರತಿಭೆಗಳಿಗೆ ಸನ್ಮಾನ

ಮಕ್ಕಳ ಗ್ರಾಮಸಭೆ- ಬಾಲ ಪ್ರತಿಭೆಗಳಿಗೆ ಸನ್ಮಾನ

Date:

ಕಟಪಾಡಿ: ಕಟಪಾಡಿ ಗ್ರಾಮ ಪಂಚಾಯತಿಯ ಮಕ್ಕಳ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಇಂದಿರಾ ಎಸ್ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಮಕ್ಕಳ ಆರೋಗ್ಯಕರ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರ ಸೇವನೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಅಪೌಷ್ಟಿಕತೆ ನಿವಾರಣೆಗೆ ಕ್ರಮ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಪ್ರೇಮಾನಂದ ಕಲ್ಮಾಡಿ ಮಾಹಿತಿ ನೀಡಿದರು. ಮಕ್ಕಳ ರಕ್ಷಣಾ ಘಟಕದ ಕಪಿಲ, ಮಕ್ಕಳ ಸಹಾಯವಾಣಿಯಿಂದ ತ್ರಿವೇಣಿ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕಿ ಪ್ರಭಾಕಲಾ
ಮಕ್ಕಳ ನಾಯಕರಾದ ಸಮೀಕ್ಷಾ, ಗಣ್ಯ, ಅಂಜಲಿ, ಕವನ, ರೋಷನಿ ಹಾಗೂ ಪಂಚಾಯತ್ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದ ಬಾಲ ಪ್ರತಿಭೆಗಳಾದ ಕೆ.ಪ್ರಥಮ ಕಾಮತ್ (ಜಾದೂ, ಕ್ಲೇ ಮಾಡೆಲಿಂಗ್), ಯಶಸ್ ಪಿ. ಸುವರ್ಣ (ಕೊಳಲು ವಾದನ), ಮಾಣಿಕ್ ಸುವರ್ಣ (ಕರಾಟೆ) ಹಾಗೂ ಎಸ್. ಎಸ್. ಎಲ್. ಸಿ. ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಅನುಶ್ರೀ ಇವರನ್ನು ಸನ್ಮಾನಿಸಲಾಯಿತು.

ಸದಸ್ಯರಾದ ಪ್ರಭಾ ಶೆಟ್ಟಿ, ಫ್ಲಾವಿಯಾ, ಶಾಲಿನಿ, ಆಗ್ನೇಸ್ ರವರು ಸನ್ಮಾನ ಪತ್ರ ವಾಚಿಸಿದರು. ಪಂಚಾಯತ್ ಉಪಾಧ್ಯಕ್ಷರಾದ ಅಬೂಬಕ್ಕರ್ ಎ. ಆರ್ ಸಾಂದರ್ಭಿಕವಾಗಿ ಮಾತನಾಡಿ ಮಕ್ಕಳಿಗೆ ಶುಭ ಹಾರೈಸಿದರು.

ಪಂಚಾಯತ್ ಸದಸ್ಯರಾದ ಫ್ಲಾವಿಯಾ ಮಿನೇಜಸ್ ಸ್ವಾಗತಿಸಿ, ಕಾರ್ಯದರ್ಶಿ ವಸಂತಿ ವಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಮತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!