Monday, September 7, 2026
Monday, September 7, 2026

ಇನ್ನಂಜೆ- ಯುವ ಮಂಡಳ ಅಭಿವೃದ್ಧಿ ಕಾರ್ಯಕ್ರಮ

ಇನ್ನಂಜೆ- ಯುವ ಮಂಡಳ ಅಭಿವೃದ್ಧಿ ಕಾರ್ಯಕ್ರಮ

Date:

ಕಾಪು: ಭಾರತ ಸರಕಾರ, ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಇವರ ಆಶ್ರಯದಲ್ಲಿ ಯುವ ಮಂಡಳ ಅಭಿವೃದ್ಧಿ ಕಾರ್ಯಕ್ರಮ 2021-22 ಇನ್ನಂಜೆ ಎಸ್.ವಿ. ಹೆಚ್. ಪ.ಪೂ. ಕಾಲೇಜು ದಾಸಭವನದಲ್ಲಿ ನಡೆಯಿತು.

ಎಸ್.ವಿ. ಹೆಚ್. ಪ.ಪೂ. ಕಾಲೇಜು ಇನ್ನಂಜೆ ಪ್ರಾಂಶುಪಾಲ ಪುಂಡರೀಕಾಕ್ಷ ಕೊಡಂಚ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಯುವಜನರು ತಮ್ಮಲ್ಲಿರುವ ಸಾಮರ್ಥ್ಯವನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡರೆ ರಾಷ್ಟ್ರನಿರ್ಮಾಣ ಪರಿಕಲ್ಪನೆ ಸಾಕಾರಗೊಳ್ಳುವುದು ಎಂದರು.

ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿ’ಸೋಜ ಪ್ರಸ್ತಾವಿಕವಾಗಿ ಮಾತನಾಡಿ ನೆಹರು ಯುವ ಕೇಂದ್ರದ ಕುರಿತು ವಿಸ್ತ್ರತವಾಗಿ ಮಾತನಾಡಿದರು.

ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಅಧ್ಯಕ್ಷ ಉಮೇಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ.ಹೆಚ್ ಕನ್ನಡ ಮಾಧ್ಯಮ ಪ್ರೌಢಶಾಲೆ ಇನ್ನಂಜೆ ಮುಖ್ಯೋಪಾಧ್ಯಾಯ ನಟರಾಜ ಉಪಾಧ್ಯಾಯ ಮುಖ್ಯ ಅತಿಥಿಯಾಗಿ ಮಾತನಾಡಿದರು.

ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಸಂಪನ್ಮೂಲ ವ್ಯಕ್ತಿಯಾಗಿ ಗ್ರಾಮೀಣಾಭಿವೃದ್ಧಿಯಲ್ಲಿ ಯುವಜನರ ಪಾತ್ರದ ಕುರಿತು ವಿಶೇಷ ಉಪನ್ಯಾಸ ನೀಡಿದರು. ನೆಹರು ಯುವ ಕೇಂದ್ರ ಲೆಕ್ಕಾಧಿಕಾರಿ ವಿಷ್ಣುಮೂರ್ತಿ ಉಪಸ್ಥಿತರಿದ್ದರು.

ಇನ್ನಂಜೆ ಯುವಕ ಮಂಡಲದ ಕಾರ್ಯದರ್ಶಿ ಹರೀಶ್ ಪೂಜಾರಿ ಸ್ವಾಗತಿಸಿ, ಮಾಜಿ ಅಧ್ಯಕ್ಷ ಮಧುಸೂದನ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!