Friday, September 20, 2024
Friday, September 20, 2024

ಪಡುಕರೆ- ಯುವ ಸಪ್ತಾಹ

ಪಡುಕರೆ- ಯುವ ಸಪ್ತಾಹ

Date:

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ ಸ್ವಾಮಿ ವಿವೇಕಾನಂದರ ೧೫೯ನೇ ಜಯಂತಿಯ ಪ್ರಯುಕ್ತ ಯುವ ಸಪ್ತಾಹವನ್ನು ಪ್ರಾಂಶುಪಾಲರು ಉದ್ಘಾಟಿಸಿದರು.

ಇದರ ಭಾಗವಾಗಿ ವಿಶೇಷ ಉಪನ್ಯಾಸವನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್.ಎನ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ವಿವೇಕಾನಂದರು ಮೌಡ್ಯಗಳಿಂದ ಮುಕ್ತವಾದ ಸುಧಾರಿತ ಹಿಂದೂ ಧರ್ಮವನ್ನು ಪ್ರತಿಪಾದಿಸಿ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಭಾರತ, ವಿಶ್ವಭ್ರಾತೃತ್ವ ಮತ್ತು ಮಾನವತೆಯನ್ನು ಜಗತ್ತಿಗೆ ಹರಡುವಲ್ಲಿ ಮಾದರಿಯಾಗಬೇಕೆಂದು ಬಯಸಿದ್ದರು.

ಸ್ತ್ರೀ ಪುರುಷ ಸಮಾನತೆಯ, ನಿರ್ಗತಿಕರನ್ನು ಮೇಲೆತ್ತುವ, ಯುವಶಕ್ತಿಯನ್ನು ಜಾಗೃತಗೊಳಿಸುವ, ವೈಜ್ಞಾನಿಕ- ವೈಚಾರಿಕತೆಯ ಹಾಗೂ ಸಾಮರಸ್ಯ-ಸಹಿಷ್ಣುತೆಯ ಅದರ ವೇದಾಂತ ತತ್ವಗಳು, ಪ್ರಾಚೀನ-ಆಧುನಿಕತೆಯ, ವಿಜ್ಞಾನ- ಆಧ್ಯಾತ್ಮಿಕ, ಪಾಶ್ಚಿಮಾತ್ಯ-ಪೌರತ್ವಗಳ ಧರ್ಮ ಮತ್ತು ವ್ಯವಹಾರಗಳ ಸಂಗಮ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ. ವಿ ಗಾಂವ್ಕರ್ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ನಾಗರಾಜ ವೈದ್ಯ, ಐಕ್ಯೂಎಸಿ ಸಂಚಾಲಕರಾದ ರವಿಪ್ರಸಾದ್ ಕೆ.ಜಿ, ರಾಷ್ಟ್ರ‍ೀಯ ಸೇವಾ ಯೋಜನೆಯ ಘಟಕ-1ರ ಅಧಿಕಾರಿಯಾದ ಡಾ. ಮುರುಳಿ ಎನ್ ಉಪಸ್ಥಿತರಿದ್ದರು.

ರಾಷ್ಟ್ರ‍ೀಯ ಸೇವಾ ಯೋಜನೆಯ ಘಟಕ-2ರ ಅಧಿಕಾರಿ ಅನಂತ್.ಸಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್.ಎಸ್.ಎಸ್. ಸ್ವಯಂಸೇವಕರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!