Monday, July 27, 2026
Monday, July 27, 2026

ಯುವವಾಹಿನಿ ಉಡುಪಿ ಘಟಕದ ಮಾದರಿ ಯೋಜನೆ

ಯುವವಾಹಿನಿ ಉಡುಪಿ ಘಟಕದ ಮಾದರಿ ಯೋಜನೆ

Date:

ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯದೊಂದಿಗೆ ಯುವವಾಹಿನಿಯು ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ ಅನ್ನ, ಅಕ್ಷರ, ಆಸರೆ ಎಂಬ ಧ್ಯೇಯದೊಂದಿಗೆ ಬಡವರಿಗೆ, ನೊಂದವರಿಗೆ, ಸೂರು ಕಲ್ಪಿಸಿಕೊಡುವ ಯುವವಾಹಿನಿ (ರಿ.) ಉಡುಪಿ ಘಟಕದ ‘ತಲೆಗೊಂದು ಸೂರು’ ಎಂಬ ಪರಿಕಲ್ಪನೆಯಡಿ ಐದನೇ ಮನೆಯ ಹಸ್ತಾಂತರ ಕಾರ್ಯಕ್ರಮ ಕಡೆಕಾರ್ ಲಯನ್ಸ್ ಕಾಲೊನಿಯಲ್ಲಿ ನಡೆಯಿತು.

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಮಾತನಾಡುತ್ತಾ, ಯುವವಾಹಿನಿಯ ಹಲವಾರು ಯೋಜನೆಗಳಲ್ಲಿ ತಲೆಗೊಂದು ಸೂರು ಯೋಜನೆ ಶ್ರೇಷ್ಠ ಯೋಜನೆಯಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್ ಮಾತನಾಡಿ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯದೊಂದಿಗೆ ಯುವವಾಹಿನಿ ಉಡುಪಿ ಘಟಕ ಹತ್ತು ಹಲವು ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಇಂತಹ ಜನಸ್ನೇಹಿ ಕಾರ್ಯ ಇತರರಿಗೂ ಪ್ರೇರಣೆಯಾಗಲಿ ಎಂದರು.

ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ಜಗದೀಶ್ ಕುಮಾರ್, ಕಾರ್ಯಕ್ರಮ ಸಂಚಾಲಕ ರಘುನಾಥ್ ಮಾಬಿಯಾನ್, ಕಾರ್ಯದರ್ಶಿ ಮಾಲತಿ ಅಮೀನ್, ಮಹಿಳಾ ಸಂಚಾಲಕಿ ನವೀಶಾ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!