Wednesday, August 12, 2026
Wednesday, August 12, 2026

ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ

ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ

Date:

ಉಡುಪಿ, ಆ.9: ದೇಶದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ರಾಜ್ಯದ ಸಂಸದರ ಶಾಸಕರ ನಿಯೋಗ ಭೇಟಿ ಮಾಡಿ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕ, ಮೈಲುತುತ್ತಿಗೆ ಪ್ರಸ್ತುತ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುತ್ತಿದ್ದು, ಅಡಿಕೆ ಬೆಳೆ ಕೃಷಿ ವ್ಯಾಪ್ತಿಯೊಳಗೆ ಬರುವುದರಿಂದ ಜಿಎಸ್‌ಟಿ ಶೇ.5ಕ್ಕೆ ಇಳಿಕೆ ಮಾಡಿ ಅಡಿಕೆ ಬೆಳೆಗಾರರ ರಕ್ಷಣೆಗೆ ಬರಬೇಕೆಂದು ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿ ಮೈಲುತುತ್ತು ಸೇರಿದಂತೆ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕಗಳ ಜಿ.ಎಸ್.ಟಿ ಇಳಿಕೆ ಬಗ್ಗೆ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯದ ಮಾಜಿ ಗೃಹ ಸಚಿವ ಹಾಗೂ ಶಾಸಕರಾದ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಸತೀಶ್ಚಂದ್ರ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯನಾರಾಯಣ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ

ಕಟಪಾಡಿ, ಆ.12: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಆ.14: ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ, ಆ.11: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್...

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯಯುತ ಜೀವನ ನಡೆಸಿ: ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ

ಉಡುಪಿ, ಆ.11: ಮಕ್ಕಳಲ್ಲಿ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ...

ಜೈ ಕುಂದಾಪ್ರ ಸೇವಾ ಟ್ರಸ್ಟ್ ರಾಜ್ಯಕ್ಕೆ ಮಾದರಿ: ಭಾಸ್ಕರ್ ಸ್ವಾಮಿ

ಕೋಟ, ಆ.11: ಜೈ ಕುಂದಾಪ್ರ ಸೇವಾ ಟ್ರಸ್ಟ್ ಯುವ ಮನಸ್ಸುಗಳಿಗೆ ಸ್ಫೂರ್ತಿ,...
error: Content is protected !!