ಉಡುಪಿ, ಆ.9: ದೇಶದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ರಾಜ್ಯದ ಸಂಸದರ ಶಾಸಕರ ನಿಯೋಗ ಭೇಟಿ ಮಾಡಿ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕ, ಮೈಲುತುತ್ತಿಗೆ ಪ್ರಸ್ತುತ ಶೇಕಡ 18ರಷ್ಟು ಜಿಎಸ್ಟಿ ವಿಧಿಸುತ್ತಿದ್ದು, ಅಡಿಕೆ ಬೆಳೆ ಕೃಷಿ ವ್ಯಾಪ್ತಿಯೊಳಗೆ ಬರುವುದರಿಂದ ಜಿಎಸ್ಟಿ ಶೇ.5ಕ್ಕೆ ಇಳಿಕೆ ಮಾಡಿ ಅಡಿಕೆ ಬೆಳೆಗಾರರ ರಕ್ಷಣೆಗೆ ಬರಬೇಕೆಂದು ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿ ಮೈಲುತುತ್ತು ಸೇರಿದಂತೆ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕಗಳ ಜಿ.ಎಸ್.ಟಿ ಇಳಿಕೆ ಬಗ್ಗೆ ಕ್ರಮ ಜರುಗಿಸುವುದಾಗಿ ತಿಳಿಸಿದರು.
ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯದ ಮಾಜಿ ಗೃಹ ಸಚಿವ ಹಾಗೂ ಶಾಸಕರಾದ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಸತೀಶ್ಚಂದ್ರ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯನಾರಾಯಣ ಮುಂತಾದವರಿದ್ದರು.




By
ForthFocus™