ಬೆಂಗಳೂರು, ಸೆ.24: ಕಳೆದ ಫೆಬ್ರವರಿಯಲ್ಲಿ 2024-29ರ ನಮ್ಮ ಹೊಸ ಕರ್ನಾಟಕ ಪ್ರವಾಸೋದ್ಯಮ ನೀತಿ ಅನಾವರಣಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ರಾಜ್ಯವನ್ನು ಭಾರತದ ನಂ. 1 ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಲು ಇದು ನಮ್ಮ ಕಾರ್ಯತಂತ್ರದ ನೀಲಿನಕ್ಷೆಯಾಗಿದೆ. 2029ರ ವೇಳೆಗೆ 1.5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಹಾಗೂ 8 ಸಾವಿರ ಕೋಟಿ ಹೂಡಿಕೆಗಳನ್ನು ಆಕರ್ಷಿಸುವ ಗುರಿ ಹೊಂದಿದ್ದೇವೆ. ನಮ್ಮ ಕರಾವಳಿ ಆಕರ್ಷಣೆಯನ್ನು ಹೆಚ್ಚಿಸಲು ರೂ. 200 ಕೋಟಿ ಮೀಸಲಿಡಲಾಗಿದೆ. ಇದರಿಂದ ಕರಾವಳಿಯುದ್ದಕ್ಕೂ 329 ಕಿ.ಮೀ. ಪ್ರಶಾಂತ ಕರಾವಳಿ ಪ್ರವಾಸೋದ್ಯಮ, ಪಶ್ಚಿಮ ಘಟ್ಟಗಳಲ್ಲಿನ ರೋಮಾಂಚಕ ಪಯಣ, ಬೆಂಗಳೂರಿನ ಐಷಾರಾಮಿ ಆತಿಥ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.





By
ForthFocus™