Saturday, February 22, 2025
Saturday, February 22, 2025

ದೇಗುಲಗಳಿಗೆ 11,499 ಎಕರೆ ಸೇರ್ಪಡೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ದೇಗುಲಗಳಿಗೆ 11,499 ಎಕರೆ ಸೇರ್ಪಡೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

Date:

ಬೆಂಗಳೂರು, ಜ.8: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಜರಾಯಿ ಇಲಾಖೆ ವತಿಯಿಂದ ದೇವಸ್ಥಾನಗಳ ಆಸ್ತಿಗಳ ದಾಖಲೆ ಮಾಹಿತಿ ಪರಿಶೀಲಿಸಲಾಯಿತು. ಈ ಸಂದರ್ಭ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬುದು ಗಮನಕ್ಕೆ ಬಂತು. ಕೂಡಲೇ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪಹಣಿ ಇಂಡೀಕರಣ ಪ್ರಕ್ರಿಯೆ ಆರಂಭಿಸಲು ಸೂಚಿಸಿದ್ದೆ. ಪರಿಣಾಮ ಎರಡು ವರ್ಷಗಳಲ್ಲಿ 11,499 ಎಕರೆ ವಿಸ್ತೀರ್ಣದ ದಾಖಲೆಗಳನ್ನು ಸರಿಪಡಿಸಲಾಗಿದೆ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಪ್ರತಿ ತಿಂಗಳೂ ಮುಜರಾಯಿ ಆಸ್ತಿಗಳ ಭೂಮಾಪನ, ದಾಖಲೆ ಪರಿಶೀಲನೆ, ತಿದ್ದುಪಡಿ, ಇಂಡೀಕರಣಕ್ಕೆ ಗುರಿ ನಿಗದಿಪಡಿಸಲಾಗಿದೆ. ಎಲ್ಲ ದೇವಾಲಯಗಳ ಆಸ್ತಿಗಳ ದಾಖಲೆಗಳನ್ನು ಸರಿಪಡಿಸಿ, ದೇವಸ್ಥಾನಗಳ ಹೆಸರಿಗೆ ಸರಿಯಾದ ಕ್ರಮದಲ್ಲಿ ದಾಖಲಿಸಲು ಇನ್ನೂ ಎರಡು ವರ್ಷ ಬೇಕಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!