Friday, October 18, 2024
Friday, October 18, 2024

ಅಧಿವೇಶನ ಆರಂಭ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಅಧಿವೇಶನ ಆರಂಭ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Date:

ಬೆಂಗಳೂರು, ಜು. 4: ಮಂಗಳವಾರ ಬೆಳಿಗ್ಗೆ ವಿಧಾನಸಭೆ ಅಧಿವೇಶನ ಆರಂಭವಾದ ತಕ್ಷಣ ಬಿಜೆಪಿ ನಾಯಕರು ನಿಲುವಳಿ ಸೂಚನೆ ಮೇಲೆ ಚರ್ಚೆಗೆ ಅವಕಾಶ ನೀಡುವಂತೆ ಪ್ರಸ್ತಾಪಿಸಿದರು. ಆದರೆ ಬಿಜೆಪಿ ನಾಯಕರ ಪ್ರಸ್ತಾಪಕ್ಕೆ ಸ್ಪೀಕರ್ ಯು.ಟಿ. ಖಾದರ್ ಅವಕಾಶ ನೀಡಿಲ್ಲ. ಸದನಲ್ಲಿ ಆಡಳಿತ-ವಿಪಕ್ಷ ಶಾಸಕರ ನಡುವೆ ಮಾತಿನ ಜಟಾಪಟಿ ನಡೆದು ಬಿಜೆಪಿ ಶಾಸಕರು, ಕಾಂಗ್ರೆಸ್​ ಜನತೆಗೆ ಮೋಸ ಮಾಡುತ್ತಿದೆ ಎಂದು ಧಿಕ್ಕಾರ ಕೂಗಿ ಸದನದ ಬಾವಿಗಿಳಿದು ಧರಣಿ ನಡೆಸಿದರು.

ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಫ್ರೀಡಂ ಪಾರ್ಕ್​ನಲ್ಲಿ ಮಂಗಳವಾರ ಬಿಜೆಪಿ ಪ್ರತಿಭಟನೆ ಆರಂಭಿಸಿದೆ. ಬಿಜೆಪಿ ಮುಖಂಡರಾದ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿ.ಸಿ.ಪಾಟೀಲ್, ನಾರಾಯಣಗೌಡ ಮುಂತಾದವರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

ಚುನಾವಣೆ ಘೋಷಣೆಯಾದ ಮೇಲೆ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳನ್ನು ರಾಜ್ಯಾದ್ಯಂತ ಯಾವುದೇ ಬದಲಾವಣೆ, ಮಾರ್ಪಾಡುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು. 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಈಗ ಐದು ಕೆಜಿಗೆ ಹಣ ನೀಡಲು ನಿರ್ಧರಿಸಿದೆ. ಜೊತೆಗೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಘೋಷಿಸಿತ್ತು. ಆದರೆ ಈಗ ಸರಾಸರಿ ಯುನಿಟ್ ನಿಬಂಧನೆ ವಿಧಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!