ಬೆಂಗಳೂರು, ಮಾ.6: ಈ ವರ್ಷ ಕೇಂದ್ರದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕೇಂದ್ರ ಸರ್ಕಾರದ ಸಾಲ 218 ಲಕ್ಷ ಕೋಟಿ ದಾಟಿದೆ. ಬಿಜಿಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ? ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಬಜೆಟ್ ಮಂಡಿಸಿದ ನಂತರ ಸುದ್ಧಿಗಾರರ ಜತೆ ಮಾತನಾಡುತ್ತಾ ಸಿಎಂ ಬಜೆಟ್ ಕುರಿತು ಮಾತನಾಡಿದರು.
ಸಾಲವು ಮಾನದಂಡಗಳಲ್ಲಿ ತಿಳಿಸಿದ ಮಿತಿಯಲ್ಲಿರಬೇಕು. 2014ರ ಮೊದಲು, 53.11 ಲಕ್ಷ ಕೋಟಿಯಿದ್ದ ದೇಶದ ಸಾಲ ಈಗ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ರೂ. 165 ಲಕ್ಷ ಕೋಟಿಯಾಗಿದೆ. ಪ್ರತಿಪಕ್ಷ ನಾಯಕ ಅಶೋಕರವರು ರಾಜ್ಯಸರ್ಕಾರ ಸಾಲ ಮಾಡುತ್ತಿದೆ ಎಂಬ ಟೀಕೆ ಮಾಡಲು ಯಾವುದೇ ನೈತಿಕತೆ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಾಗ, 5,33,847 ಕೋಟಿ ಸಾಲವಿತ್ತು. ಎಲ್ಲ ಸರ್ಕಾರಗಳ ಅವಧಿಯಲ್ಲಿ ಸಾಲಗಳನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.




By
ForthFocus™