ಬೆಂಗಳೂರು, ಜ.22: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ ಪಾಲಿಸಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರು ಅತಿರೇಕದಿಂದ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.
ಇಷ್ಟಕ್ಕೂ ರಾಜ್ಯಪಾಲರು ಈ ರೀತಿ ತಮ್ಮ ಭಾಷಣವನ್ನ ಪೂರ್ತಿ ಓದದೆ ಕೇವಲ ಸಾಂಕೇತಿಕವಾಗಿ ಮಂಡಿಸಿ ಹೊರಟಿರುವುದು ಇದೇನು ಮೊದಲಲ್ಲ. ಈ ಹಿಂದೆ ಮಾಜಿ ರಾಜ್ಯಪಾಲರುಗಳಾದ ಖುರ್ಷಿದ್ ಆಲಂ ಖಾನ್ ಹಾಗೂ ಹಂಸರಾಜ್ ಭಾರಧ್ವಾಜ್ ಅವರು ಈ ರೀತಿ ಮಾಡಿದ್ದಾರೆ.
ಇಂದಿನ ಘಟನಾವಳಿಗಳು ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನವಾಗಿದ್ದು, ಸದನದ ಗೌರವಕ್ಕೆ ಚ್ಯುತಿ ತರುವ ರೀತಿ ವರ್ತಿಸಿದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದೇನೆ ಎಂದು ಅಶೋಕ್ ಹೇಳಿದ್ದಾರೆ.




By
ForthFocus™