Sunday, September 8, 2024
Sunday, September 8, 2024

ಕೇಂದ್ರ ಸರ್ಕಾರದ ಸಬ್ಸಿಡಿ ದರದ ‘ಭಾರತ್ ಅಕ್ಕಿ’ ಮಾರಾಟಕ್ಕೆ ಚಾಲನೆ

ಕೇಂದ್ರ ಸರ್ಕಾರದ ಸಬ್ಸಿಡಿ ದರದ ‘ಭಾರತ್ ಅಕ್ಕಿ’ ಮಾರಾಟಕ್ಕೆ ಚಾಲನೆ

Date:

ಬೆಂಗಳೂರು, ಫೆ.7: ಕೇಂದ್ರದ ‘ಭಾರತ್’ ಬ್ರ್ಯಾಂಡ್ ಅಕ್ಕಿಯನ್ನು ರೂ. 29/ಕೆಜಿ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಮಂಗಳವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ‘ಭಾರತ್’ ಬ್ರ್ಯಾಂಡ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಿದರು. ಬಿಡುಗಡೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ, ಇಡೀ ದೇಶದಲ್ಲಿ ಒಂದೇ ಬ್ರ್ಯಾಂಡಿನಡಿಯಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಉಪಕ್ರಮವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದ್ದು ಶ್ಲಾಘನೀಯ. ಜನಸಾಮಾನ್ಯರ ದೈನಂದಿನ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈಗಾಗಲೇ ಕೇಂದ್ರ ಸರ್ಕಾರದ ವತಿಯಿಂದ ಬೇಳೆ, ಹಿಟ್ಟು ಕೂಡ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಸಬ್ಸಿಡಿ ಬೆಲೆಯಲ್ಲಿ ಲಭ್ಯವಾಗುತ್ತಿವೆ ಎಂದು ಹೇಳಿದರು. ಇದೀಗ, ಉತ್ತಮ ಗುಣಮಟ್ಟದ ಅಕ್ಕಿಯನ್ನು ಕೆಜಿಗೆ 29 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ಮಧ್ಯಮ ಮತ್ತು ಕಡಿಮೆ ಆದಾಯದ ಜನರಿಗೆ ಸಹಾಯವಾಗಲಿದೆ ಎಂದರು.

‘ಭಾರತ್’ ಅಕ್ಕಿಯು ಕೇಂದ್ರೀಯ ಭಂಡಾರ್, ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ, ಮತ್ತು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ನ ಎಲ್ಲಾ ಮಳಿಗೆಗಳಲ್ಲಿ ಲಭ್ಯ ಮತ್ತು ಇತರ ಚಿಲ್ಲರೆ ಮಾರಾಟ ಮಳಿಗೆಗಳಿಗೆ, ಇಕಾಮರ್ಸ್ ಗಳಿಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಹೊರಡಿಸಿದ ಹೇಳಿಕೆ ತಿಳಿಸಿದೆ. ‘ಭಾರತ್’ ಬ್ರಾಂಡ್ ಅಕ್ಕಿಯನ್ನು 5 ಕೆಜಿ ಮತ್ತು 10 ಕೆಜಿ ಪ್ಯಾಕ್‌ಗಳಲ್ಲಿ ಮಾರಾಟ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!