Monday, February 24, 2025
Monday, February 24, 2025

ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಚಾಮರಾಜನಗರ, ಆ.10: ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಚಾಮರಾಜನಗರ ಜಿಲ್ಲಾಡಳಿತ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು. ಆದರೂ ನಾನು ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ಬಂದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ. ಸಿದ್ದರಾಮಯ್ಯರ ಕಾಲ್ಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆ ಅಂದರೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಎಲ್ಲಾ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು.

ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕತೆಯ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಸಿಎಂ ಹೇಳಿದರು. ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...
error: Content is protected !!