ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಹಾಗೂ ಸಹೋದರ ಡಿ.ಕೆ. ಸುರೇಶ್ ಜತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದರು.

ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯನವರ ದೂರದೃಷ್ಟಿಯ ನಾಯಕತ್ವ, ಅಪಾರ ಆಡಳಿತ ಅನುಭವ ಹಾಗೂ ನಾಡಿನ ಜನರ ಅಭಿವೃದ್ಧಿಯತ್ತ ಅವರ ಅಚಲ ಬದ್ಧತೆ ನಮ್ಮ ರಾಜ್ಯದ ಪ್ರಗತಿಯ ಪಯಣಕ್ಕೆ ಸದಾ ಬಲ ತುಂಬಲಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ಜನಕಲ್ಯಾಣ ಮತ್ತು ಸುಭದ್ರ ಭವಿಷ್ಯ ನಿರ್ಮಾಣಕ್ಕೆ ಸಿದ್ದರಾಮಯ್ಯನವರ ಮಾರ್ಗದರ್ಶನ ಮತ್ತು ಆಶೀರ್ವಾದವು ಸದಾ ಪ್ರೇರಣೆಯಾಗಿದೆ ಎಂದರು.




By
ForthFocus™