Home ಸುದ್ಧಿಗಳು ರಾಜ್ಯ ಜಾಲಪ್ಪರವರ ಸಮಾಜಮುಖಿ ಕಾರ್ಯ ನಮಗೆಲ್ಲರಿಗೂ ಪ್ರೇರಣೆ: ಮುಖ್ಯಮಂತ್ರಿ

ಜಾಲಪ್ಪರವರ ಸಮಾಜಮುಖಿ ಕಾರ್ಯ ನಮಗೆಲ್ಲರಿಗೂ ಪ್ರೇರಣೆ: ಮುಖ್ಯಮಂತ್ರಿ

553
0

ಕೋಲಾರ: ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಾಲಪ್ಪರವರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ, ಶಾಸಕರಾಗಿ, ರಾಜ್ಯ ಸರ್ಕಾರದಲ್ಲಿ ಸಚಿವರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ಜಾಲಪ್ಪರವರು ಅನೇಕ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿ ಶೈಕ್ಷಣಿಕ ಕ್ರಾಂತಿಯ ಮೂಲಕ ಅನೇಕ ಮಂದಿಗೆ ದಾರಿದೀಪವಾಗಿದ್ದಾರೆ. ಅವರ ಸಮಾಜಮುಖಿ ಕಾರ್ಯಗಳು ನಮಗೆಲ್ಲರಿಗೂ ಪ್ರೇರಣೆಯಾಗಿದೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.