Friday, September 20, 2024
Friday, September 20, 2024

ದೇವರಾಜ ಅರಸು ಕೆಲಸ ನಮಗೆ ಸ್ಪೂರ್ತಿ: ಸಿದ್ಧರಾಮಯ್ಯ

ದೇವರಾಜ ಅರಸು ಕೆಲಸ ನಮಗೆ ಸ್ಪೂರ್ತಿ: ಸಿದ್ಧರಾಮಯ್ಯ

Date:

ಬೆಂಗಳೂರು: ದೇವರಾಜ ಅರಸು ಅವರು ಭೂ ಸುಧಾರಣೆ, ಜೀತ ವಿಮುಕ್ತಿ, ಋಣಮುಕ್ತ ಯೋಜನೆ ಸೇರಿದಂತೆ ಹಲವು ಕ್ರಾಂತಿಕಾರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಜನಪರ ಯೋಜನೆಗಳನ್ನು ಯಥಾವತ್ತಾಗಿ ಜಾರಿಗೆ ತಂದು ಜನರಿಗೆ ತಲುಪಿಸಿದವರು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದರು.

ಕನಸಿನಲ್ಲಿಯೂ ವಿಧಾನಸೌಧ ನೋಡದವರನ್ನು, ವಿಧಾನಸೌಧದ ಮೆಟ್ಟಿಲು ಹತ್ತುತ್ತೇವೆ ಎಂದು ನಿರೀಕ್ಷೆ ಮಾಡದವರನ್ನು ಕರೆ ತಂದು ಶಾಸಕ, ಮಂತ್ರಿಗಳನ್ನಾಗಿ ಮಾಡಿದರು. ಹಿಂದುಳಿದವರಿಗೆ ನಿಜವಾದ ಮೀಸಲು ಸೌಲಭ್ಯ ಕೊಟ್ಟವರು ದೇವರಾಜ ಅರಸು. ನಾನು ವರುಣಾ ನಾಲೆಗೆ ಆಗ್ರಹಿಸಿ ಚಳವಳಿ ಮಾಡುತ್ತಿದ್ದೆ. ಆಗ ಗುಂಡೂರಾಯರು ಮುಖ್ಯಮಂತ್ರಿಯಾಗಿದ್ದರು. ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸ್ಥಳಕ್ಕೆ ಅರಸು ಅವರು ಬಂದಿದ್ದರು. ಆಗ ಮೊದಲ ಬಾರಿಗೆ ನಾನು ಅವರನ್ನು ನೋಡಿದ್ದು.

ರಾಜ್ಯ ರಾಜಕಾರಣದಲ್ಲಿ ದೇವರಾಜ ಅರಸು ಅವರು ಒಬ್ಬ ಧೀಮಂತ ನಾಯಕ. ಅವರು ಮಾಡಿರುವ ಕೆಲಸಗಳೇ ನಮಗೆ ಸ್ಫೂರ್ತಿ. ರಾಜೀವ್ ಗಾಂಧಿ ಹಾಗೂ ಅರಸು ಅವರು ಮಾಡಿರುವ ಜನಪರ ಕಾರ್ಯಗಳನ್ನು ನೆನಪು ಮಾಡಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!