Home ಸುದ್ಧಿಗಳು ರಾಜ್ಯ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಡಾ.ಎಸ್ ಅರ್ ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಡಾ.ಎಸ್ ಅರ್ ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

365
0

ಉಡುಪಿ, ಮೇ 15: ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್ ಆರ್ ಹರೀಶ್ ಆಚಾರ್ಯ ಅವರು ಬುಧವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ. ಹನುಮಂತಪ್ಪ ಕಲ್ಮನಿ, ಜಿಲ್ಲಾಧ್ಯಕ್ಷ ಮನಮೋಹನ್ ಬಳ್ಳಡ್ಕ, ಶಿಕ್ಷಕ ಸಂಘಟನೆಯ ಪ್ರಮುಖರಾದ ರಂಜಿತ್ ಪಿ.ಜೆ., ಡಾ. ಅರುಣ್ ಕುಮಾರ್ ಮತ್ತು ನಿತೇಶ್ ಸಾಲಿಯಾನ್ ಉಪಸ್ಥಿತರಿದ್ದರು.

ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳ ಜತೆ ಮಾತನಾಡುತ್ತಾ, ರಾಜಕೀಯ ಪಕ್ಷಗಳು ಕರಾವಳಿ ಜಿಲ್ಲೆಗಳ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದಲ್ಲಿ ಯಾವುದೇ ಪ್ರಾತಿನಿಧ್ಯವನ್ನು ನೀಡದೆ ಸಂಪೂರ್ಣ ನಿರ್ಲಕ್ಷ್ಯವನ್ನು ಮಾಡಿದೆ. ಕರಾವಳಿ ಭಾಗದ ಇರುವಿಕೆಯ ಅಸ್ತಿತ್ವವನ್ನೇ ನಿರಾಕರಿಸಿದಂತಾಗಿದೆ. ಆದುದರಿಂದ ಶಿಕ್ಷಕರ ಮತ್ತು ಪದವೀಧರರ ಸ್ವಾಭಿಮಾನದ ಪ್ರತೀಕವಾಗಿ ಈ ಬಾರಿಯ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.