Friday, October 18, 2024
Friday, October 18, 2024

ಎಲ್ಲ ಸಮಸ್ಯೆಗಳಿಗೂ ಭಗವದ್ಗೀತೆಯಲ್ಲಿದೆ ಪರಿಹಾರ: ಪುತ್ತಿಗೆ ಶ್ರೀ

ಎಲ್ಲ ಸಮಸ್ಯೆಗಳಿಗೂ ಭಗವದ್ಗೀತೆಯಲ್ಲಿದೆ ಪರಿಹಾರ: ಪುತ್ತಿಗೆ ಶ್ರೀ

Date:

ಬೆಂಗಳೂರು, ಆ. 12: ಜಗತ್ತಿನ ಸಮಸ್ತ ಸಮಸ್ಯೆಗಳಿಗೆ ಪರಿಹಾರ ರೂಪವಾಗಿರುವ ಬದುಕಿನ ಸಾರ್ಥಕತೆಗೆ ಮಾರ್ಗದರ್ಶಿಯಾಗಿರುವ ಭಗವದ್ಗೀತೆಯನ್ನು ಜೀವನದಲ್ಲಿ ಒಮ್ಮೆಯಾದರೂ ಓದಲೇಬೇಕು ಎಂದು ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು. ಉಪಾಧ್ಯ ಪ್ರತಿಷ್ಠಾನ ಆಶ್ರಯದಲ್ಲಿ ಹೊಂಬೇಗೌಡನಗರದ ಸಂಕರ್ಷಣ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೃಹತ್ ಗೀತಾ ಲೇಖನ ಪ್ರಚಾರ ಅಭಿಯಾನದಲ್ಲಿ ಅವರು ಆಶೀರ್ವಚನ ನೀಡಿದರು.

ಭಗವದ್ಗೀತೆ ಮತಗ್ರಂಥ ಅಲ್ಲ, ಮನ:ಶಾಸ್ತ್ರ ಗ್ರಂಥ ಎಂದು ಹೇಳಿದ ಅವರು ಇವತ್ತಿನ ಶಿಕ್ಷಣ ಪದ್ಧತಿ ಸಂಸ್ಕೃತಿಯಿಂದ ದೂರವಾಗಿರುವ ಕಾರಣವೇ ಆತ್ಮಹತ್ಯೆ, ಕೊಲೆ, ಮನೋವ್ಯಾದಿಗಳಂತಹ ಸಮಸ್ಯೆಗಳು ಬಾಧಿಸುತ್ತಿವೆ. ಸಮಾಜದಲ್ಲಿ ಸಂಪಾದನೆಗಾಗಿ ವಿದ್ಯೆ ಎಂಬ ಚಿಂತನೆ ವ್ಯಾಪಿಸಿದೆ. ಅಶಾಂತಿ, ಅಭದ್ರತೆ ನೆಲೆಸಿದೆ. ಎಲ್ಲ ಸಮಸ್ಯೆಗಳಿಗೂ ಭಗವದ್ಗೀತೆಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.

ನೂರಾರು ಮಂದಿಗೆ ಅವರು ಗೀತಾಲೇಖನ ದೀಕ್ಷೆ ಬೋಧಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಬಾ ರಾಮಚಂದ್ರ ಉಪಾಧ್ಯ, ಹೋಟೆಲ್ ಬ್ಯಾಂಕ್ ಅಧ್ಯಕ್ಷ ಶ್ರೀಪತಿ ಬಾಯರ್, ಆರೆಸ್ಸೆಸ್ ಮುಖಂಡ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!