Home ಸುದ್ಧಿಗಳು ರಾಜ್ಯ ಡಾ. ಗಣನಾಥ ಎಕ್ಕಾರು ಅವರಿಗೆ ಹಂಸಜ್ಯೋತಿ ಸಮ್ಮಾನ್ ಪ್ರಶಸ್ತಿ

ಡಾ. ಗಣನಾಥ ಎಕ್ಕಾರು ಅವರಿಗೆ ಹಂಸಜ್ಯೋತಿ ಸಮ್ಮಾನ್ ಪ್ರಶಸ್ತಿ

450
0

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಹಂಸಜ್ಯೋತಿ ಟ್ರಸ್ಟ್ (ರಿ.) ಪ್ರತಿ ವರ್ಷ ನೀಡುವ ಹಂಸಜ್ಯೋತಿ ಸಮ್ಮಾನ್-2022 ಪ್ರಶಸ್ತಿಯನ್ನು ನಿವೃತ್ತ ರಾಜ್ಯ ಎನ್.ಎಸ್.ಎಸ್. ಅಧಿಕಾರಿ, ವಿದ್ವಾಂಸ ಡಾ. ಗಣನಾಥ ಎಕ್ಕಾರು ಅವರಿಗೆ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಜೀವಮಾನ ಸಾಧನೆಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ನಡೆದ ಹಂಸ ಅಶ್ವಯುಜ ಸಾಂಸ್ಕೃತಿಕ ಸಂಭ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕರ್ನಾಟಕ ಅಬಕಾರಿ ಇಲಾಖೆಯ ಆಯುಕ್ತ ಡಾ. ಬಿ.ಆರ್. ಹಿರೇಮಠ, ಹಾಫ್ ಕಾಮ್ಸ್ ತೋಟಗಾರಿಕಾ ಇಲಾಖೆಯ ನಿರ್ದೇಶಕರಾದ ಎಂ. ವಿಜಯ ಕುಮಾರ, ಹಂಸಜ್ಯೋತಿ ಟ್ರಸ್ಟ್ನ ಸಂಸ್ಥಾಪಕ ಮು. ಮುರಳೀಧರ, ಶೇಶಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯರಾಂ ಪ್ರಶಸ್ತಿ ನೀಡಿ ಗೌರವಿಸಿದರು. ಸಹಕಾರಿ ಸಚಿವ ಎಸ್. ಟಿ. ಸೋಮಶೇಖರ್ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.