Friday, September 20, 2024
Friday, September 20, 2024

ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗೆ ಹೋಲಿಸಿ ಕಾಂಗ್ರೆಸ್ ನಾಯಕರು ವೈಚಾರಿಕ ದಿವಾಳಿತನವನ್ನ ಪ್ರದರ್ಶಿಸಿದ್ದಾರೆ: ಆರೋಗ್ಯ ಸಚಿವ ಡಾ. ಸುಧಾಕರ್

ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗೆ ಹೋಲಿಸಿ ಕಾಂಗ್ರೆಸ್ ನಾಯಕರು ವೈಚಾರಿಕ ದಿವಾಳಿತನವನ್ನ ಪ್ರದರ್ಶಿಸಿದ್ದಾರೆ: ಆರೋಗ್ಯ ಸಚಿವ ಡಾ. ಸುಧಾಕರ್

Date:

ಬೆಂಗಳೂರು: ಇತಿಹಾಸದ ಜ್ಞಾನವಿಲ್ಲದೆ, ಹತಾಶ ಮನೋಭಾವನೆಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಂದಿಸುವ ಮೂಲಕ ಕಾಂಗ್ರೆಸ್ ಪಕ್ಷ ಹಿಂದೂ ಧರ್ಮಕ್ಕೆ, ರಾಷ್ಟ್ರ ಪ್ರೇಮಿಗಳಿಗೆ, ರಾಷ್ಟ್ರೀಯತೆಗೆ ಘೋರ ಅಪಮಾನ ಎಸಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಜೆಪಿ ರಂತಹ ಮಹಾನ್ ನಾಯಕರೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವೆ, ಸಮರ್ಪಣೆ, ಸಮಾನತೆ, ಭಾತೃತ್ವದ ಭಾವನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಇತಿಹಾಸದಲ್ಲಿ ದಾಖಲಾಗಿದೆ.

1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಆರ್.ಎಸ್.ಎಸ್ ಸ್ವಯಂಸೇವಕರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು 1963ರ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್ ಗೆ ಸ್ವಯಂಸೇವಕರನ್ನು ಆಹ್ವಾನಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿರವರು 2018ರಲ್ಲಿ ಆರ್.ಎಸ್.ಎಸ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಜಕೀಯ ಲಾಭಕ್ಕಾಗಿ ದೇಶಭಕ್ತ ಸಂಘಟನೆಗಳನ್ನು ನಿಂದಿಸುವ ಕಾಂಗ್ರೆಸ್ ಪಕ್ಷದ ಈ ನಡೆಯನ್ನ ಯಾವ ದೇಶಪ್ರೇಮಿಯೂ ಕ್ಷಮಿಸುವುದಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!