Sunday, September 22, 2024
Sunday, September 22, 2024

ಹೊನ್ನಾವರ ‌ಮಹಾಪ್ರಧಾನ‌ ಯೀಚಪ್ಪ ಒಡೆಯರ ಅಪ್ರಕಟಿತ ‌ಶಾಸನ‌ ಪತ್ತೆ

ಹೊನ್ನಾವರ ‌ಮಹಾಪ್ರಧಾನ‌ ಯೀಚಪ್ಪ ಒಡೆಯರ ಅಪ್ರಕಟಿತ ‌ಶಾಸನ‌ ಪತ್ತೆ

Date:

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ‌ತಾಲೂಕಿನ ಶಿರಾಲಿ‌ ಗ್ರಾಮದ ತಟ್ಟಿಹಕ್ಕಿಲಿನಲ್ಲಿರುವ ಮಣ್ ಹೊಂಡದ ಶ್ರೀ ಕೇಶವಮೂರ್ತಿ ದೇವಾಲಯದ ಆವರಣದಲ್ಲಿ ಅಪ್ರಕಟಿತ ಶಾಸನವೊಂದು ಪತ್ತೆಯಾಗಿದೆ.‌ ಈ ಶಾಸನವು ವಿಜಯನಗರದ‌ ದೊರೆಗಳಾದ ಇಮ್ಮಡಿ‌ ಹರಿಹರ ಮತ್ತು ಒಂದನೇ ದೇವರಾಯನ ಕಾಲದಲ್ಲಿ ಕೇಶವನಾಥ ದೇವರಿಗೆ ಬಿಟ್ಟ ದತ್ತಿ ವಿಷಯವನ್ನು ಪ್ರಸ್ತಾಪಿಸುತ್ತಿದೆ.

ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಟಟ್ಟಿರುವ ಈ ಶಾಸನವು 3.5 ಅಡಿ ಎತ್ತರ ಹಾಗು 2.5 ಅಡಿ‌ ಅಗಲವಾಗಿದೆ‌‌. ಶಾಸನದಲ್ಲಿ ಒಟ್ಟು 37 ಸಾಲುಗಳಿದ್ದು ಕನ್ನಡ ಲಿಪಿ ಮತ್ತು ಭಾಷೆಯದ್ದಾಗಿದೆ. ಶಾಸನದ ಶಿರೋಭಾಗದಲ್ಲಿ ಶಿವಲಿಂಗಕ್ಕೆ ಪೂಜೆಗೈಯ್ಯುತ್ತಿರುವ ಯತಿ, ಕರುವಿಗೆ ಹಾಲುಣಿಸುತ್ತಿರುವ ಹಸು ಹಾಗೂ ನಂದಿಯ ಉಬ್ಬು ಕೆತ್ತೆನೆಯಿದೆ.

ಶಾಸನವು ಎರಡು ಕಾಲಘಟ್ಟದಲ್ಲಿ ದಾನ ನೀಡಿರುವ ವಿಷಯವನ್ನು ಉಲ್ಲೇಖಿಸುತ್ತದೆ. ವಿಜಯನಗರದ ದೊರೆ ಒಂದನೇ ದೇವರಾಯನು‌ ಆಳ್ವಿಕೆ ಮಾಡುತ್ತಿರುವಾಗ ಹೊನ್ನಾವರದ ರಾಜಧಾನಿಯಲ್ಲಿದ್ದುಕೊಂಡು ಹಯಿವೆ-ತುಳು-ಕೊಂಕಣ ಪ್ರದೇಶಗಳನ್ನು ಆಳ್ವಿಕೆ ಮಾಡುತ್ತಿದ್ದ ಮಹಾಪ್ರಧಾನ ಯೀಚಪ್ಪ ಒಡೆಯನು 1333 ನೆಯ ವಿಕೃತ ಸಂವತ್ಸರದ ಕಾರ್ತಿಕ ಶುದ್ಧ 1 ಶುಕ್ರವಾರ (ಕ್ರಿ.‌ಶ 1410 ನವೆಂಬರ್ 6 ಮಂಗಳವಾರ)ದಂದು ಮಂಡ್ಮಣದ ಕೇಶವನಾಥ ದೇವರಿಗೆ ಕೊಟ್ಟ ದತ್ತಿಯ ಕುರಿತು ಉಲ್ಲೇಖಿಸುತ್ತದೆ. ಹಾಗೆಯೇ ಶಕವರುಷ 1312 ನೆಯ ಶುಕ್ಲ ಸಂವತ್ಸರದ ಪಾಲ್ಗುಣ ಮಾಸ ಶು 13 ಆದಿತ್ಯವಾರ ( ಕ್ರಿ.ಶ 1390 ಮಾರ್ಚ್ 8 ಸೋಮವಾರ)ದಂದು ವಿಜಯನಗರದ ದೊರೆ ಇಮ್ಮಡಿ ಹರಿಹರ ಆಳ್ವಿಕೆ ಮಾಡುತ್ತಿರುವಾಗ ಹೊನ್ನಾವರದ ರಾಜಧಾನಿಯಿಂದ ಆಳ್ವಿಕೆ ಮಾಡುತ್ತಿದ್ದ ಮಹಾಪ್ರಧಾನ ಮಲ್ಲಪ್ಪ ಒಡೆಯನು ಬೆಂಗರೆಯ ತಟ್ಟಿಹಕ್ಕಲ ಕೇಶವನಾಥ ದೇವರ ಅಮೃತಪಡಿಯ ಧರ್ಮಕ್ಕೆ ಭೂಮಿಯನ್ನು ದತ್ತಿ ಬಿಟ್ಟುಕೊಟ್ಟಿರುವುದು ತಿಳಿದುಬರುತ್ತದೆ.

ಈ ದತ್ತಿಯನ್ನು ಆ ಚಂದ್ರರ್ಕ ಸ್ಥಾಯಿಯಾಗಿ ಪಾಲಿಸಿಕೊಂಡು ಬರಬೇಕೆಂದು ಯೀಚಪ್ಪ ‌ಒಡೆಯರು ಶಾಸನವನ್ನು ಬರೆಯಿಸಿ ಮಂಡ್ಮಣ ಕೇಶವನಾಥ ದೇವಾಲಯದಲ್ಲಿ ಸ್ಥಾಪಿಸಿರುವ ವಿಷಯ ಶಿಲಾಶಾಸನದ ಮುಖ್ಯ ವಸ್ತುವಾಗಿದೆ.
ಶಾಸನದಲ್ಲಿ ಉಲ್ಲೇಖಿತ ಮಂಡ್ಮಣ ಪ್ರಸ್ತುತ ಮಣ್ ಹೊಂಡವಾಗಿರಬೇಕು, ಇನ್ನುಳಿದಂತೆ ಬೆಂಗ್ರೆ ಮತ್ತು ತಟ್ಟಿಹಕ್ಕಲು ಹೆಸರು ಯಥಾವತ್ತಾಗಿ ಇಂದಿಗೂ ಮುಂದುವರಿದಿದೆ ಎಂದು ಶಾಸನವನ್ನು ಓದಿ ಅರ್ಥೈಸಿಕೊಂಡ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥರಾದ ಡಾ.‌ ಗಣಪತಿ ಗೌಡ ಮತ್ತು ಇತಿಹಾಸ ಮತ್ತು ಪುರಾತತ್ವ ‌ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ತಿಳಿಸಿದ್ದಾರೆ.

ಈ ಶಾಸನವನ್ನು ಸಂಶೋಧಿಸುವಲ್ಲಿ ಶ್ರೀ ಕೇಶವನಾಥ ದೇವಾಲಯದ ಅಧ್ಯಕ್ಷರಾದ ಆನಂದ ದೇವಾಡಿಗ, ಉತ್ಸವ ಸಮಿತಿಯ ಅಧ್ಯಕ್ಷರಾದ ರವಿ ದೇವಾಡಿಗ, ಸಮಿತಿಯ ಸದಸ್ಯರಾದ ವೆಂಕಟ್ರಮಣ ದೇವಾಡಿಗ, ಸುಬ್ರಾಯ ದೇವಾಡಿಗ, ರಾಮಕೃಷ್ಣ ದೇವಾಡಿಗ, ಜನಾರ್ದನ ದೇವಾಡಿಗ, ದೇವರಾಜ ದೇವಾಡಿಗ, ಮಂಜುನಾಥ ದೇವಾಡಿಗ ಮತ್ತು ಸಂಕರ್ಷಣ ಗುರುದತ್ತ ಶುಕ್ಲ ಮೊದಲಾದವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!