Friday, October 18, 2024
Friday, October 18, 2024

ನಿಫಾ ಭೀತಿ: ರಾಜ್ಯದಲ್ಲೂ ಕಟ್ಟೆಚರ; ಚೆಕ್ ಪೋಸ್ಟ್ ತೆರೆಯಲು ಸೂಚನೆ

ನಿಫಾ ಭೀತಿ: ರಾಜ್ಯದಲ್ಲೂ ಕಟ್ಟೆಚರ; ಚೆಕ್ ಪೋಸ್ಟ್ ತೆರೆಯಲು ಸೂಚನೆ

Date:

ಬೆಂಗಳೂರು, ಸೆ. 15: ಕೇರಳದಲ್ಲಿ ಮಾರಣಾಂತಿಕ ನಿಫಾ ಸೋಂಕು ಏರಿಕೆಯಾಗುತ್ತಿರುವ ಬೆನ್ನಲ್ಲಿ, ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೇರಳ ರಾಜ್ಯದ ಗಡಿಗಳಲ್ಲಿರುವ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಲು ‘ಫೀವರ್ ಸರ್ವಿಲೆನ್ಸ್’ ಕೈಗೊಳ್ಳಲು ಚೆಕ್ ಪೋಸ್ಟ್ ಗಳನ್ನು ತೆರೆಯಲು ಸೂಚನೆ ನೀಡಿದೆ. ಕೇರಳದಲ್ಲಿ ಸೋಂಕು ಕಂಡುಬಂದಿರುವ ಪ್ರದೇಶಗಳಿಗೆ ಅನಾವಶ್ಯಕ ಪ್ರಯಾಣ ಮಾಡದಿರಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಶುಕ್ರವಾರ ಕೇರಳದ ಕೋಯಿಕ್ಕೋಡ್ ನಲ್ಲಿ ಮತ್ತೊಂದು ನಿಫಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ ಆರಕ್ಕೇರಿದೆ, ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕೇರಳದ ಕಂಡುಬಂದಿರುವ ಎಲ್ಲಾ ಪ್ರಕರಣಗಳು ಕೋಯಿಕ್ಕೋಡ್ ನಲ್ಲೇ ಪತ್ತೆಯಾಗಿರುವುದರಿಂದ ಜಿಲ್ಲೆಯಲ್ಲಿ ಸೆಪ್ಟೆಂಬರ್ 16 ರಂದು ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಕೋಯಿಕ್ಕೋಡ್ ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಕೂಡ ನಿಗಾ ಕೇರಳ ಸರ್ಕಾರದ ಜತೆಗೆ ಸಮನ್ವಯ ಸಾಧಿಸಿ ನಿಗಾ ವಹಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!