Saturday, July 25, 2026
Saturday, July 25, 2026

ಪ್ರಧಾನಿ ಮೋದಿ ನಾಯಕತ್ವದಲ್ಲಿ ರಾಜ್ಯ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ: ಪ್ರಹ್ಲಾದ್ ಜೋಷಿ

ಪ್ರಧಾನಿ ಮೋದಿ ನಾಯಕತ್ವದಲ್ಲಿ ರಾಜ್ಯ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ: ಪ್ರಹ್ಲಾದ್ ಜೋಷಿ

Date:

ನವದೆಹಲಿ, ಫೆ.7: 15 ನೇ ಹಣಕಾಸು ಆಯೋಗದಿಂದ ಕರ್ನಾಟಕದ ತೆರಿಗೆ ಪಾಲು 3.647% ರಷ್ಟು ನಿಗದಿಪಡಿಸಲಾಗಿದ್ದು, 2025-26 ಸಾಲಿನಲ್ಲಿ ರೂ. 51,876 ಕೋಟಿ ತೆರಿಗೆ ಹಂಚಿಕೆ (ಕಳೆದ ವರ್ಷಕ್ಕಿಂತ 10% ಹೆಚ್ಚು) ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು. 2004-2014ರ ಅವಧಿಯಲ್ಲಿ ಕರ್ನಾಟಕಕ್ಕೆ ಕೇವಲ ರೂ.81,795 ಕೋಟಿ ನೀಡಲಾಗಿತ್ತು. 2014-2024ರ‌‌ ಅವಧಿಯಲ್ಲಿ ಕರ್ನಾಟಕಕ್ಕೆ ಬರೊಬ್ಬರಿ ರೂ.2,85,452 ಕೋಟಿ ತೆರಿಗೆ ಹಂಚಿಕೆ ಮಾಡಲಾಗಿದೆ. ಬರೊಬ್ಬರಿ ರೂ. 7,564 ಕೋಟಿ ವೆಚ್ಚದಲ್ಲಿ 15 ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನೀಡಲಾಗಿದ್ದು, ಇದು ರಾಜ್ಯಕ್ಕೆ ಅತ್ಯಧಿಕ ರೈಲ್ವೆ ಯೋಜನೆಗಳ ಹಂಚಿಕೆಯಾಗಿದೆ.

ಸ್ಟಾರ್ಟ್‌ ಅಪ್‌ಗಳಿಗೆ 10 ವರ್ಷಗಳ ತೆರಿಗೆ ರಜೆ (ಏಪ್ರಿಲ್ 2030 ರವರೆಗೆ)ಯ ಜೊತೆಗೆ ರೂ.10,000 ಕೋಟಿ ಅನುದಾನ ನೀಡಲಾಗಿದೆ. ಕರ್ನಾಟಕದ ಬೆಳವಣಿಗೆಗೆ ಈ ಶಕ್ತಿಯುತ ಸುಧಾರಣೆಗಳು, ದೊಡ್ಡ ಅವಕಾಶಗಳು‌ ಉಜ್ವಲ ಭವಿಷ್ಯ ರೂಪಿಸಲಿವೆ ಮತ್ತು ನಾವೀನ್ಯತೆಯ ಶಕ್ತಿ ಕೇಂದ್ರವಾಗಿ ಹೊರಹೊಮ್ಮಲಿವೆ ಎಂದು ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!