Saturday, September 21, 2024
Saturday, September 21, 2024

ಕೆ.ಎಸ್.ಆರ್.ಟಿ.ಸಿ- ಎಲೆಕ್ಟ್ರಿಕ್ ಬಸ್ ಪ್ರಾರಂಭ

ಕೆ.ಎಸ್.ಆರ್.ಟಿ.ಸಿ- ಎಲೆಕ್ಟ್ರಿಕ್ ಬಸ್ ಪ್ರಾರಂಭ

Date:

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ- ನೂತನ ಎಲೆಕ್ಟ್ರಿಕ್ ಬಸ್ ಪ್ರಾರಂಭವಾಗಿದೆ. ಮೊದಲ ಎಲೆಕ್ಟ್ರಿಕ್ ಬಸ್ಸಿನ ಪರೀಕ್ಷಾರ್ಥ ಸಂಚಾರ ಶೀಘ್ರದಲ್ಲಿಯೇ ಆರಂಭವಾಗಲಿದೆ. ಜನವರಿ-ಫೆಬ್ರವರಿ ವೇಳೆಗೆ ಸುಮಾರು ೫೦ ಎಲೆಕ್ಟ್ರಿಕ್ ಬಸ್ಗಳು ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. 12 ಮೀ ಇ-ಬಸ್ ಅನ್ನು ಖಾಸಗಿ ಕಂಪನಿ ಒಲೆಕ್ಟ್ರಾ ಒಟ್ಟು ವೆಚ್ಚದ ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುತ್ತದೆ. ಎಸಿ ಬಸ್ 43 ಪುಶ್-ಬ್ಯಾಕ್ ಸೀಟ್ಗಳನ್ನು ಹೊಂದಿದೆ. ಆನ್ಬೋರ್ಡ್ ಮತ್ತು ಆಫ್ಬೋರ್ಡ್ ಚಾರ್ಜಿಂಗ್ ಸೌಲಭ್ಯಗಳೊಂದಿಗೆ ಒಂದೇ ಚಾರ್ಜ್ನಲ್ಲಿ 300 ಕಿಮೀ ವರೆಗೆ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.

ಎಲೆಕ್ಟ್ರಿಕ್ ಬಸ್ ಪ್ರಾರಂಭದ ಬಗ್ಗೆ ಮಾತನಾಡಿದ ಸಚಿವ ಶ್ರೀರಾಮುಲು, ಕೇಂದ್ರ ಸರ್ಕಾರದ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ಯೋಜನೆಯಡಿಯಲ್ಲಿ ಕೆಎಸ್ಆರ್ಟಿಸಿಗೆ ಎಲೆಕ್ಟ್ರಿಕ್ ಬಸ್ಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಮಾಲಿನ್ಯವನ್ನು ತಡೆಗಟ್ಟುವ ಗುರಿಯನ್ನು ಈ ಯೋಜನೆ ಹೊಂದಿದ್ದು ಇದೊಂದು ಉತ್ತಮ ಬೆಳವಣಿಗೆಯಾಗಿದೆ. 2030 ರ ವೇಳೆಗೆ ಎಲ್ಲಾ ಬಸ್ ಗಳನ್ನು ಸಂಪೂರ್ಣ ಎಲೆಕ್ಟ್ರಿಕ್ ಬಸ್ ಗಳಾಗಿ ಪರಿವರ್ತಿಸುವ ಯೋಜನೆ ಸರ್ಕಾರದ ಮುಂದಿದೆ ಎಂದು ತಿಳಿಸಿದ್ದಾರೆ.

ಎಲ್ಲೆಲ್ಲಿ ಸಂಚಾರ? ಬೆಂಗಳೂರಿನಿಂದ ಮೈಸೂರು, ಮಡಿಕೇರಿ, ವಿರಾಜಪೇಟೆ, ಚಿಕ್ಕಮಗಳೂರು, ದಾವಣಗೆರೆ ಮತ್ತು ಶಿವಮೊಗ್ಗಕ್ಕೆ ಎಲೆಕ್ಟ್ರಿಕ್ ಬಸ್ಗಳ ಸಂಚಾರ ಆರಂಭವಾಗಲಿದ್ದು, ಬೆಂಗಳೂರು ಮತ್ತು ಮೈಸೂರಿನಲ್ಲಿ ಎಲೆಕ್ಟ್ರಿಕ್ ಬಸ್ ಬ್ಯಾಟರಿ ಚಾರ್ಜ್ ಮಾಡಲು ಈಗಾಗಲೇ ಚಾರ್ಜಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಶೀಘ್ರದಲ್ಲಿಯೇ ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗದಲ್ಲಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!