ಬೆಂಗಳೂರು, ಜ.21: ಗಣರಾಜ್ಯೋತ್ಸವದ ಸಂಭ್ರಮದ ಅಂಗವಾಗಿ ಲಾಲ್ಬಾಗ್ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು. ಈ ಬಾರಿಯ ಪ್ರದರ್ಶನವು ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಮತ್ತು ಕೃತಿಗಳ “ತೇಜಸ್ವಿ ವಿಸ್ಮಯ” ಥೀಮ್ ಅಡಿಯಲ್ಲಿ ಮೂಡಿಬಂದಿದೆ.

ಕರ್ವಾಲೋ ಕಾದಂಬರಿಯ ಕಾಲ್ಪನಿಕ ಚಿತ್ರಣ, ಬಿಳಿಗಿರಿ ರಂಗನ ಬೆಟ್ಟದ ಹಳ್ಳಿ ಸೊಗಡು ಹಾಗೂ ನಂದಿಗಿರಿಧಾಮದಂತಹ ಅದ್ಭುತ ಕಲಾಕೃತಿಗಳು ಪ್ರಕೃತಿ ಪ್ರೇಮಿಗಳ ಮನಗೆಲ್ಲಲಿವೆ.
ಜನವರಿ 26 ರವರೆಗೆ ನಡೆಯಲಿರುವ ಈ ಫಲಪುಷ್ಪ ಪ್ರದರ್ಶನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ, ಪ್ರಕೃತಿಯ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಹೇಳಿದರು.
ಸಾರಿಗೆ ಸಚಿವ ರಾಮಲಿಂಗರೆಡ್ಡಿ, ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಶಾಸಕರಾದ ಉದಯ್ ಗರುಡಾಚಾರ್, ಟಿ.ಎ. ಶರವಣ ಮುಂತಾದವರು ಉಪಸ್ಥಿತರಿದ್ದರು.




By
ForthFocus™