Friday, February 27, 2026
Friday, February 27, 2026

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

Date:

ಬೆಂಗಳೂರು, ಜ.30: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು.

ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಾಗಲಿ. ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರಗಳು ಒಂದು ಮಾಧ್ಯಮ‌ವಾಗಿ ನೆರವಾಗಬೇಕು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಕಾಶ್ ರಾಜ್, ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯರಾದ ಚಿದಾನಂದ ಪಟೇಲ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು

ಚೆನ್ನೈ, ಫೆ.26: ಇಲ್ಲಿಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್...

ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌: ಜ್ಞಾನಸುಧಾದ ೮ ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ, ಫೆ.26: ಎನ್.ಟಿ.ಎ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ ಬಿ.ಆರ್ಕ್ ಮತ್ತು...

ಬೆಂಗಳೂರಿನ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ ‘ನಕಲಿ ವಿಶ್ವವಿದ್ಯಾಲಯ’ ಎಂದು ಯುಜಿಸಿ ಘೋಷಣೆ; ವಿದ್ಯಾರ್ಥಿಗಳು ಅದರಿಂದ ದೂರವಿರಲು ಸಲಹೆ

ಬೆಂಗಳೂರು, ಫೆ.26: ರಾಜಾಜಿನಗರದಲ್ಲಿರುವ ಬೆಂಗಳೂರು ಮೂಲದ 'ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ'ಯನ್ನು...
error: Content is protected !!