Sunday, February 23, 2025
Sunday, February 23, 2025

ಮಂತ್ರಾಲಯದಲ್ಲಿ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಾಲಯದ ನೂತನ ಶಿಲಾಮಯ ಕಟ್ಟಡದ ಮಾದರಿ ಬಿಡುಗಡೆ

ಮಂತ್ರಾಲಯದಲ್ಲಿ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಾಲಯದ ನೂತನ ಶಿಲಾಮಯ ಕಟ್ಟಡದ ಮಾದರಿ ಬಿಡುಗಡೆ

Date:

ತುಮಕೂರು, ಡಿ.23: ಕಲ್ಪತರು ನಾಡು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಶಕ್ತಿಮಾತೆ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ಅಮ್ಮನವರ ನೂತನ ಶಿಲಾಮಯ ದೇವಾಲಯದ ಕಟ್ಟಡದ ಮಾದರಿ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ಜರುಗಿತು. ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಸುಬುದೇಂದ್ರ ತೀರ್ಥ ಸ್ವಾಮೀಜಿ ರವರು ಮಾದರಿಯನ್ನು ಬಿಡುಗಡೆಗೊಳಿಸಿ ಇದೊಂದು ವಿಶೇಷ ಮಾದರಿಯ ದೇವಾಲಯ. ಪುನರ್ ನಿರ್ಮಾಣವಾಗುತ್ತಿರುವುದು ಬಹಳ ಸಂತೋಷದ ಸಂಗತಿ. ಇದೊಂದು ಪುಣ್ಯ ಕ್ಷೇತ್ರವಾಗಿ ಭಕ್ತರ ಅಭೀಷ್ಟೆಗಳನ್ನು ಈಡೇರಿಸುವ ಕ್ಷೇತ್ರವಾಗಲಿ ಎಂದು ಶುಭ ಹಾರೈಸಿದರು. ಸ್ವಾಮೀಜಿಯವರನ್ನು ದೇವಾಲಯದ ವತಿಯಿಂದ ಫಲ ಪುಷ್ಪ, ಕಂಬಳಿ ಕೊಬ್ಬರಿ ನೀಡಿ ಗೌರವಿಸಲಾಯಿತು. ದೇವಾಲಯದ ಧರ್ಮದರ್ಶಿ ರಂಗಸ್ವಾಮಿ ಸಿ.ಎನ್., ರಾಯರ ರಂಗಮಂದಿರದ ಮುಖ್ಯಸ್ಥ ಪ್ರಕಾಶ್, ರಂಗರಾಜು, ಆಡಳಿತ ಮುಖ್ಯಸ್ಥರಾದ ಲಕ್ಷ್ಮೀಶ ಸಿ ಆರ್., ಉಪಾಧ್ಯಕ್ಷರಾದ ನಾಗರತ್ನ, ರವಿಕುಮಾರ್, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!