Thursday, September 19, 2024
Thursday, September 19, 2024

ಬೆಳೆ ವಿಮೆ ಯೋಜನೆ ಅರ್ಜಿ ಅವಧಿ ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಬೆಳೆ ವಿಮೆ ಯೋಜನೆ ಅರ್ಜಿ ಅವಧಿ ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

Date:

ನವದೆಹಲಿ, ಆ.1: ಕೇಂದ್ರ ಸರ್ಕಾರದ ಬೆಳೆವಿಮೆ ಯೋಜನೆಗೆ ಅರ್ಜಿ ಹಾಕುವ ಅವಧಿಯನ್ನು ವಿಸ್ತರಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಮನವಿ ಸಲ್ಲಿಸಿದ್ದಾರೆ. . ಉಡುಪಿ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ರೈತಾಪಿ ವರ್ಗ ಕೇಂದ್ರ ಸರ್ಕಾರದ ಹವಾಮಾನ ಆಧಾರಿತ ಬೆಳೆ ವಿಮೆಯ ಸದುಪಯೋಗ ಪಡೆಯುತ್ತಿದ್ದು ಪ್ರಸ್ತುತ ಆನ್ಲೈನ್ ಅರ್ಜಿ ಪ್ರಾರಂಭವಾದ ಹಿನ್ನೆಲೆಯಲ್ಲಿ ಹಲವಾರು ತೊಡಕುಗಳಿಂದ ರೈತರಿಗೆ ದಾಖಲಾತಿಗಳೊಂದಿಗೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ. ಆದ್ದರಿಂದ ಜುಲೈ ತಿಂಗಳ ಅಂತ್ಯದಲ್ಲಿ ಮುಗಿಯುವ ಬೆಳೆ ವಿಮೆ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಬೇಕೆಂದು ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌವ್ಹಾನ್ ಅವರನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ಕೂಡಲೇ ಆದೇಶ ನೀಡುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!