Home ಸುದ್ಧಿಗಳು ರಾಜ್ಯ ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರೊಂದಿಗೆ ಚರ್ಚೆ ನಡೆದಿಲ್ಲ: ಅರುಣ್ ಸಿಂಗ್

ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರೊಂದಿಗೆ ಚರ್ಚೆ ನಡೆದಿಲ್ಲ: ಅರುಣ್ ಸಿಂಗ್

451
0

ನಾನು ಶಾಸಕರೊಂದಿಗೆ ನಾಯಕತ್ವದ ಬಗ್ಗೆ ಏನೂ ಚರ್ಚಿಸಲಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ತನ್ಮೂಲಕ ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಕನಸು ಕಾಣುತ್ತಿದ್ದ ಕೆಲವು ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪಕ್ಷಕ್ಕೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸುವ ಎರಡು ಮೂರು ಶಾಸಕರು ಇದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಇತರ ನಾಯಕರು ಆ ಶಾಸಕರ ಹೇಳಿಕೆಗಳ ದಾಖಲೆಯನ್ನು ಇಟ್ಟುಕೊಂಡಿದ್ದಾರೆ.

ಶಾಸಕ ವಿಶ್ವನಾಥ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಸುದ್ಧಿಗಾರರು ಪ್ರಸ್ತಾಪಿಸಿದಾಗ, ವಿಶ್ವನಾಥ್ ಪಕ್ಷಕ್ಕೆ ಹೊಸಬರು ಮತ್ತು ಪಕ್ಷದ ಸಂಸ್ಕೃತಿಯ ಬಗ್ಗೆ ಅವರಿಗೆ ತಿಳಿದಿಲ್ಲ ಎಂದು ಅರುಣ್ ಸಿಂಗ್ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.