Wednesday, April 22, 2026
Wednesday, April 22, 2026

ಭ್ರೂಣ ಹತ್ಯೆ ತಡೆಗಟ್ಟಲು ನೋಡಲ್ ಅಧಿಕಾರಿ ನೇಮಕ

ಭ್ರೂಣ ಹತ್ಯೆ ತಡೆಗಟ್ಟಲು ನೋಡಲ್ ಅಧಿಕಾರಿ ನೇಮಕ

Date:

ಬೆಳಗಾವಿ, ಡಿ.19: ರಾಜ್ಯಾದ್ಯಂತ ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರ ನೀಡಿದರು.

ರಾಜ್ಯದ ಕೆಲ ಜಿಲ್ಲೆಗಳಲ್ಲಿ, ಕೆಲ ಆಸ್ಪತ್ರೆಗಳಲ್ಲಿಯೇ ಗಂಡು ಸಂತಾನವು ಗರಿಷ್ಟ ಪ್ರಮಾಣದಲ್ಲಿ ದಾಖಲಾಗುತ್ತಿರುವುದನ್ನು ಗುಪ್ತಚರ ದಾಳಿಯ ಮೂಲಕ ಕಂಡುಕೊಳ್ಳಲಾಗುತ್ತಿದೆ. ಯಾವ ತಾಲೂಕಿನಲ್ಲಿ ಗಂಡು ಹೆಣ್ಣಿನ ಅನುಪಾತ ಹೆಚ್ಚುತ್ತಿದೆ? ಯಾವ ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎನ್ನುವಂತಹ ಅಂಶಗಳ ಮೇಲೆ ಮೇಲ್ವಿಚಾರಣೆ ನಡೆಸಿ, ಅಂತಹ ಜಾಲವನ್ನು ಹತ್ತಿಕ್ಕಲು ಸೂಕ್ತ ಕ್ರಮವಹಿಸುತ್ತಿದ್ದೇವೆ.

ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ 2024-25 ನೇ ಸಾಲಿನಲ್ಲಿ ಬಸ್ ಬ್ರ್ಯಾಂಡಿಂಗ್‌, ಟ್ರೈನ್ ಬ್ರ್ಯಾಂಡಿಂಗ್‌, ಹೋರ್ಡಿಂಗ್ಸ್‌ ಗೋಡೆ ಬರಹ, ರೇಡಿಯೋ ಜಿಂಗಲ್ಸ್, ಟಿ.ವಿ. ಸ್ಪಾಟ್ಸ್ ಮುಖಾಂತರ ಸಾರ್ವಜನಿಕರಿಗೆ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯ ಕುರಿತು ಅರಿವು ಮೂಡಿಸಲಾಗುತ್ತಿದೆ.

ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಬಗ್ಗೆ ರಾಜ್ಯ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಲಕಾಲಕ್ಕೆ ಅರಿವು ಮೂಡಿಸುವ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!