Home ಸುದ್ಧಿಗಳು ರಾಜ್ಯ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ

1226
0

ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೆಲವೇ ಹೊತ್ತಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಅವರ ಸಮ್ಮುಖದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾದರು.

ಸಚಿವ ಆರ್ ಅಶೋಕ್, ವರ್ತೂರ್‌ ಪ್ರಕಾಶ್‌, ಮಾಜಿ ಸಂಸದರಾದ ಕೆ. ಬಿ. ಕೃಷ್ಣಮೂರ್ತಿ, ಮಾಜಿ ಶಾಸಕ ಮಂಜುನಾಥ ಗೌಡ, ಮಾಜಿ ಪರಿಷತ್‌ ಸದಸ್ಯರಾದ ಸಂದೇಶ್‌ ನಾಗರಾಜ್‌,‌ ಮಂಡ್ಯ ಜಿಲ್ಲಾ ಮುಖಂಡರಾದ ಅಶೋಕ್‌ ಜಯರಾಮ್, ಮಾಜಿ ಐಆರ್‌ಎಸ್‌ ಅಧಿಕಾರಿ ಡಾ. ಲಕ್ಷ್ಮಿ ಅಶ್ವಿನ್‌ ಗೌಡ, ಸಚಿವರು, ಶಾಸಕರು, ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.