Home ಸುದ್ಧಿಗಳು ರಾಜ್ಯ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ

ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ

141
0

ಬೆಂಗಳೂರು, ಏ.17: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಬುಧವಾರ ರಾಜ್ಯಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬರಮಾಡಿಕೊಂಡರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಂತಾದವರು ಇದ್ದರು. ರಾಹುಲ್ ಗಾಂಧಿಯವರು ಬುಧವಾರ ಮಧ್ಯಾಹ್ನ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು ನಾವು. ರೈತರ ಪರವಾಗಿ ಕೆಲಸ ಮಾಡಿದ್ದೇವೆ. ಸುಳ್ಳು ಭರವಸೆಗಳೇ ಬಿಜೆಪಿ ಸಾಧನೆ. ಸಂವಿಧಾನವನ್ನು ಧ್ವಂಸ ಮಾಡಲು ಆರ್.ಎಸ್.ಎಸ್. ಮತ್ತು ಬಿಜೆಪಿ ಪ್ರಯತ್ನಿಸುತ್ತಿವೆ ಎಂದು ರಾಹುಲ್ ಗಾಂಧಿ ತಮ್ಮ ಮಾತಿನಲ್ಲಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.