Friday, June 19, 2026
Friday, June 19, 2026

ಅಗತ್ಯ ವಸ್ತುಗಳ ಬೆಲೆ ಏರಿಸಿ ಬೊಕ್ಕಸ ತುಂಬಿಸಿಕೊಳ್ಳಲು ಜನರಿಂದಲೇ ವಸೂಲಿ: ಬಿ.ವೈ.ವಿಜಯೇಂದ್ರ

ಅಗತ್ಯ ವಸ್ತುಗಳ ಬೆಲೆ ಏರಿಸಿ ಬೊಕ್ಕಸ ತುಂಬಿಸಿಕೊಳ್ಳಲು ಜನರಿಂದಲೇ ವಸೂಲಿ: ಬಿ.ವೈ.ವಿಜಯೇಂದ್ರ

Date:

ಮಂಗಳೂರು, ಏ.10: ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಜನಾಕ್ರೋಶ ಯಾತ್ರೆ‌ ಮಂಗಳೂರಿನಲ್ಲಿ ನಡೆಯಿತು. ಯತ್ರೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕುಡಿಯುವ ನೀರಿನಿಂದಿಡಿದು ವಿದ್ಯುತ್, ಬಸ್, ಹಾಲು, ಡೀಸೆಲ್ ಸೇರಿದಂತೆ ಪ್ರತಿಯೊಂದು ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಸಿ ಸರ್ಕಾರದ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಜನರಿಂದಲೇ ವಸೂಲಿಗಿಳಿದಿದೆ. ಅಲ್ಲದೇ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಸರ್ಕಾರದ ಕಾಮಗಾರಿಗಳಲ್ಲಿ ಮೀಸಲಾತಿ ನೀಡಿ, ಹಿಂದೂ ಸಮುದಾಯಕ್ಕೆ ದ್ರೋಹ ಬಗೆದಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸುವ ಸಂಕಲ್ಪ ಮಾಡಬೇಕಿದೆ ಎಂದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಶ್ರೀರಾಮುಲು, ಮಾಜಿ ಸಚಿವ ಎಸ್.ಅಂಗಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಪ್ರೀತಮ್ ಗೌಡ, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದರಾದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕಿಶೋರ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷರಾದ ಎಂ.ಎಸ್.ಪಾಟೀಲ್ ನಡಹಳ್ಳಿ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ, ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ, ಉಮಾನಾಥ್ ಕೋಟ್ಯಾನ್, ಡಾ. ವೈ ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!