Tuesday, October 22, 2024
Tuesday, October 22, 2024

ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ

ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ

Date:

ಬೆಂಗಳೂರು, ಜೂ.20: ಕರಾವಳಿ ಮೀನುಗಾರರ ವಿವಿಧ ಸಮಸ್ಯೆ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಿದರು. ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಪದಾಧಿಕಾರಿಗಳು ಸಚಿವರನ್ನು ಭೇಟಿಯಾಗಿ ರಾಜ್ಯದ ಎಲ್ಲಾ ಮೀನುಗಾರಿಕಾ ಬಂದರಿಗೆ ಸಂಬಂಧಿಸಿದ ರಸ್ತೆ ಹಾಗೂ ಮೂಲ ಸೌಕರ್ಯ ಅಭಿವದ್ಧಿ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು.

1984 ಮೀನುಗಾರಿಕಾ ಕಾಯ್ದೆಯ ನಿಯಮಾವಳಿಗಳನ್ನು ಪ್ರಸ್ತುತ ಸಾಲಿಗೆ ಪೂರಕವಾಗುವಂತೆ ತಿದ್ದುಪಡಿ, ಬಂದರಿನ ಸಮರ್ಪಕ ನಿರ್ವಹಣೆಯ ಹಿತದೃಷ್ಟಿಯಿಂದ ಸ್ಥಳೀಯ ಮೀನುಗಾರಿಕಾ ಸಂಘ ಸಂಸ್ಥೆಗಳಿಗೆ ಅವಕಾಶ ಕಲ್ಪಿಸುವುದು, ದಿನವಹಿ ಡೀಸೆಲ್ ಕೋಟವನ್ನು 500 ಲೀಟರಿಗೆ ಏರಿಕೆ, ಮಹಿಳಾ ಮೀನುಗಾರರಿಗೆ ಬಡ್ಡಿರಹಿತ ಸಾಲ ಹಾಗೂ ಮೀನು ಒಣಗಿಸುವ ಸ್ಥಳವನ್ನು ರಿಯಾಯಿತಿ ದರದಲ್ಲಿ ಕನಿಷ್ಠ 15 ವರ್ಷಕ್ಕೆ ಗುತ್ತಿಗೆ ನೀಡುವುದು, ಮೀನುಗಾರಿಕಾ ಬೋಟ್ ವಿಮೆಯ ನಿಯಮಾವಳಿ ಸರಳೀಕರಣ ಹಾಗೂ ವಿಮಾ ಪರಿಹಾರ ಮೊತ್ತವನ್ನು ಶೀಘ್ರ ಮಂಜೂರು ಮಾಡಲು ಕ್ರಮ ಹಾಗೂ ಮಲ್ಪೆ ಮೀನುಗಾರಿಕಾ ಬಂದರಿನ ಔಟರ್ ಹಾರ್ಬರ್ ಯೋಜನೆ ಮಂಜೂರು, ಡ್ರೆಜಿಂಗ್ ಹಾಗೂ ವಿವಿಧ ಬಂದರುಗಳ ಅಭಿವೃದ್ಧಿ, ನಾಡದೋಣಿ ಮೀನುಗಾರರಿಗೆ ಸಮರ್ಪಕ ಸೀಮೆ ಎಣ್ಣೆ ಪೂರೈಕೆ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆ ನಿರ್ದೇಶಕರಾದ ದಿನೇಶ್ ಕಲ್ಲೇರ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿಯ ಪದಾಧಿಕಾರಿಗಳಾದ ರಾಮಚಂದ್ರ ಕುಂದರ್, ಸೋಮನಾಥ ಕಾಂಚನ್, ಮೋಹನ್ ಬೆಂಗ್ರೆ, ಚೇತನ್ ಬೆಂಗ್ರೆ, ನವೀನ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ಕಟಪಾಡಿ, ಅ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಸಮೂಹ ಶಿಕ್ಷಣ...
error: Content is protected !!