Monday, February 24, 2025
Monday, February 24, 2025

ಟಿ.ಬಿ ವಿರುದ್ಧದ ಹೋರಾಟದಲ್ಲಿ ವಿಶ್ವಾಸಾರ್ಹ ಬಿಸಿಜಿ ಲಸಿಕೆ

ಟಿ.ಬಿ ವಿರುದ್ಧದ ಹೋರಾಟದಲ್ಲಿ ವಿಶ್ವಾಸಾರ್ಹ ಬಿಸಿಜಿ ಲಸಿಕೆ

Date:

ಉಡುಪಿ, ಆ.5: ಜಾಗತಿಕ ಮಟ್ಟದಲ್ಲಿ ಒಂದು ಲಕ್ಷ ಜನಸಂಖ್ಯೆಗೆ 133 ಕ್ಷಯ ಪ್ರಕರಣಗಳು ಕಂಡುಬಂದಿದ್ದು, ಭಾರತದಲ್ಲಿ ಒಂದು ಲಕ್ಷ ಜನಸಂಖ್ಯೆಗೆ 199 ಕ್ಷಯರೋಗ ಪ್ರಕರಣಗಳು ದಾಖಲಾಗಿರುತ್ತದೆ. ಕ್ಷಯ ರೋಗ ನಿರ್ಮೂಲನೆ ಮಾಡುವ ಗುರಿ ಸಾಧಿಸಲು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಕ್ಷಯರೋಗಕ್ಕೆ ತುತ್ತಾಗಬಹುದಾದ ಸಾಧ್ಯತೆ ಇರುವ ವಯಸ್ಕರಿಗೆ ಬಿಸಿಜಿ ಲಸಿಕೆಯನ್ನು ನೀಡುವುದರೊಂದಿಗೆ ಕ್ಷಯರೋಗದ ಅಪಾಯವನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ. ದೇಶಾದ್ಯಂತ ಬಿಸಿಜಿ ಲಸಿಕೆ ಅಧ್ಯಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರೊಂದಿಗೆ ಇದು ಸುರಕ್ಷಿತ ಹಾಗೂ ಪರಿಣಾಮಕಾರಿಯಾದ ಲಸಿಕೆ ಎಂದು ದೃಢಪಟ್ಟಿದೆ. 2025 ಕ್ಕೆ ಕ್ಷಯರೋಗ ನಿರ್ಮೂಲನೆ ಮಾಡುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ರಾಜ್ಯದ 6 ಜಿಲ್ಲೆಗಳಲ್ಲಿ ಬಿಸಿಜಿ ಲಸಿಕಾ ಕಾರ್ಯಕ್ರಮವನ್ನು ಆಗಸ್ಟ್ 01 ರಿಂದ 14 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಕಳೆದ 5 ವರ್ಷಗಳಲ್ಲಿ ಕ್ಷಯರೋಗದ ಸೋಂಕಿಗೆ ತುತ್ತಾದವರು, ಸಕ್ರೀಯ ಕ್ಷಯರೋಗ ಪ್ರಕರಣದ ಹತ್ತಿರದ ಸೋಂಕಿತರು, ದೇಹಗಾತ್ರದ ಸೂಚ್ಯಾಂಕ (ಬಿ.ಎಮ್.ಐ) 18 ಕೆ.ಜಿ/ ಚದುರ ಮೀಟರ್, ಸ್ವಯಂ ವರದಿ ಮಾಡಿಕೊಂಡ ಧೂಮಪಾನಿಗಳು, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಹಾಗೂ 60 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲಾ ವಯಸ್ಕರು ಬಿಸಿಜಿ ಲಸಿಕೆಗೆ ಅರ್ಹರಾಗಿರುತ್ತಾರೆ.

ಬಿಸಿಜಿ ಲಸಿಕೆ ಪಡೆಯಬಹುದಾದ ಅರ್ಹ ಫಲಾನುಭವಿಗಳ ಸಮೀಕ್ಷೆ ನಡೆಸಲು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಕ್ಷೇತ್ರ ಭೇಟಿ ನೀಡಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...
error: Content is protected !!