Sunday, February 23, 2025
Sunday, February 23, 2025

ಮತಾಂತರ ನಿಷೇಧ ಕಾಯ್ದೆ ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧ: ಸಿದ್ಧರಾಮಯ್ಯ

ಮತಾಂತರ ನಿಷೇಧ ಕಾಯ್ದೆ ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧ: ಸಿದ್ಧರಾಮಯ್ಯ

Date:

ಬೆಳಗಾವಿ: ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಜಾಹೀರಾತು

ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ.

ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ.

ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ.

ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ. ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ. ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ.

ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು.

ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ.

ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಿಜವಾಗಿ ಈಗ ನಾವು ಮಾಡಲೇಬೇಕಾದ ಕೆಲಸ.

ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿರುವ ಈ ಕಾಯ್ದೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಸಿದ್ಧರಾಮಯ್ಯ ಒತ್ತಾಯ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!