Sunday, April 19, 2026
Sunday, April 19, 2026

ಸಿದ್ದಲಿಂಗಯ್ಯನವರು ಸಾಹಿತ್ಯವನ್ನು ಸಾಮಾಜಿಕ ಬದಲಾವಣೆಯ ಅಸ್ತ್ರವನ್ನಾಗಿ ಮಾಡಿ ಸಮಾನತೆಯ ಹೋರಾಟ ಮುನ್ನಡೆಸಿದರು: ಸಿದ್ಧರಾಮಯ್ಯ

ಸಿದ್ದಲಿಂಗಯ್ಯನವರು ಸಾಹಿತ್ಯವನ್ನು ಸಾಮಾಜಿಕ ಬದಲಾವಣೆಯ ಅಸ್ತ್ರವನ್ನಾಗಿ ಮಾಡಿ ಸಮಾನತೆಯ ಹೋರಾಟ ಮುನ್ನಡೆಸಿದರು: ಸಿದ್ಧರಾಮಯ್ಯ

Date:

ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ಪ್ರಾಧ್ಯಾಪಕ, ವಿಧಾನಪರಿಷತ್ ನ ಮಾಜಿ ಸದಸ್ಯ ಹಾಗೂ ನನ್ನ ಬಹುಕಾಲದ ಮಿತ್ರ ಸಿದ್ದಲಿಂಗಯ್ಯನವರ ಸಾವು ನನ್ನ ಪಾಲಿಗೆ ಆಘಾತಕಾರಿಯಾದುದು ಮಾತ್ರವಲ್ಲ ಅನಿರೀಕ್ಷಿತವೂ ಹೌದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನತಾ ಪಕ್ಷದ ಆಳ್ವಿಕೆಯ ಕಾಲದಲ್ಲಿ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಸಣ್ಣ ಪ್ರಾಯದ ಕವಿ ಸಿದ್ದಲಿಂಗಯ್ಯನವರನ್ನು ವಿಧಾನಪರಿಷತ್ ಗೆ ನಾಮನಿರ್ದೇಶನ ಮಾಡಿದ್ದರು. ಆ ಕಾಲದಿಂದ ಸಿದ್ದಲಿಂಗಯ್ಯನವರು ನನಗೆ ಪರಿಚಿತರು.

ಹೊಲೆ ಮಾದಿಗರ ಹಾಡು ಕವನ ಸಂಕಲನದ ಮೂಲಕ ಆ ಕಾಲದಲ್ಲಿಯೇ ಮನೆಮಾತಾಗಿದ್ದ ಸಿದ್ದಲಿಂಗಯ್ಯನವರು, ಸಾಹಿತ್ಯವನ್ನು ಸಾಮಾಜಿಕ ಬದಲಾವಣೆಯ ಅಸ್ತ್ರವನ್ನಾಗಿ ಮಾಡಿ ಸಮಾನತೆಯ ಹೋರಾಟವನ್ನು ಮುನ್ನಡೆಸಿದವರು. ಕನ್ನಡ ಸಾಹಿತ್ಯದಲ್ಲಿ ದಲಿತ ಲೋಕವೊಂದನ್ನು ಅನಾವರಣಗೊಳಿಸಿದ ಬಂಡಾಯ ಸಾಹಿತ್ಯ ಚಳುವಳಿಯ ಸಾಹಿತಿಗಳಲ್ಲಿ ಸಿದ್ದಲಿಂಗಯ್ಯ ಪ್ರಮುಖರು. ದಲಿತ ಸಂಘರ್ಷ ಸಮಿತಿಯ ಸ್ಥಾಪಕರಲ್ಲೊಬ್ಬರಾಗಿದ್ದರು.

ಕೆಂಡದಂತಹ ಕವನಗಳನ್ನು ಬರೆಯುತ್ತಿದ್ದ ಸಿದ್ದಲಿಂಗಯ್ಯನವರು ವೈಯಕ್ತಿಕವಾಗಿ ಬಹಳ ಮೃದು ಸ್ವಭಾವದ ಮುಜುಗರದ ವ್ಯಕ್ತಿ. ತಾವಿದ್ದಲ್ಲಿ ತನ್ನ ಮಾತುಗಳ ಮೂಲಕವೇ ನಗು, ಸಂತೋಷ, ವಿನೋದದ ಲವಲವಿಕೆಯ ಲೋಕವನ್ನೇ ಅವರು ಸೃಷ್ಟಿಸುತ್ತಿದ್ದರು. ಸಿದ್ದಲಿಂಗಯ್ಯನವರು ಇನ್ನಿಲ್ಲವಾದರೂ ಅವರು ಬರೆದಿರುವ ಸಾಹಿತ್ಯದ ಮೂಲಕ ಸದಾ ನಮ್ಮ ನೆನಪಲ್ಲಿರುತ್ತಾರೆ. ಅವರ ಅಗಲಿಕೆಯ ದುಃಖದಲ್ಲಿರುವ ಕುಟುಂಬದ ಸದಸ್ಯರಿಗೆ ನನ್ನ ಸಂತಾಪಗಳು, ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು...
error: Content is protected !!