Saturday, September 5, 2026
Saturday, September 5, 2026

ನಳಿನ್ ಕುಮಾರ್ ಕಟೀಲ್ ರವರಿಗೆ ಸಿದ್ಧು ಸವಾಲು

ನಳಿನ್ ಕುಮಾರ್ ಕಟೀಲ್ ರವರಿಗೆ ಸಿದ್ಧು ಸವಾಲು

Date:

ಬೆಂಗಳೂರು: ದಲಿತರ ಬಗ್ಗೆ ಬಿಜೆಪಿಯವರಿಗೆ ನೈಜ ಕಾಳಜಿ ಇದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ. ಇದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ನನ್ನ ಸವಾಲು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ದಲಿತರನ್ನು ಸಿಎಂ ಮಾಡಲಿ ಎಂದು ನಳಿನ್ ಕುಮಾರ್ ಕಟೀಲ್ ನನಗೆ ಹೇಳಿದ್ದರು. ನಮ್ಮ ಪಕ್ಷದಲ್ಲಿ ದಲಿತರು ಸಿಎಂ ಆಗಿದ್ದಾರೆ.‌ ಹೀಗಾಗಿ ಸದ್ಯ ಬಿಜೆಪಿಗೆ ಆ ಅವಕಾಶ ಇದೆ, ನಳಿನ್ ಕುಮಾರ್ ಕಟೀಲ್ ಅವರು ಈಗ ದಲಿತರನ್ನು ಸಿಎಂ ಮಾಡಿ, ಸಾಮಾಜಿಕ ನ್ಯಾಯ ಎತ್ತಿ ಹಿಡಿಯಲಿ.

ಮಠಾಧೀಶರೇ, ರಾಜಕಾರಣಕ್ಕೆ ಬರಬೇಡಿ:

ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು.‌ ಇಲ್ಲಿ ಜನಾಭಿಪ್ರಾಯವೇ ಅಂತಿಮ. ಮಠಾಧೀಶರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಠಗಳ ಬಗ್ಗೆ ಜನರಿಗಿರುವ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ ಎಂದು ಸಿದ್ಧರಾಮಯ್ಯ ಹೇಳಿದರು.

ವಲಸಿಗರಿಗಿಲ್ಲ ಸಹಾಯ’ಹಸ್ತ’:

ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನಮ್ಮ‌ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಎನ್ನುವುದು ನನಗಂತೂ ಗೊತ್ತಿಲ್ಲ. ಪಕ್ಷಕ್ಕೆ ಅವರನ್ನು ವಾಪಾಸು ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಿದ್ದೇನೆ ಎಂದು ಸಿದ್ಧರಾಮಯ್ಯ ಒತ್ತಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!